ಬ್ರೇಕಿಂಗ್ ನ್ಯೂಸ್
21-08-23 08:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ಮದ್ಯದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಿದ್ದರು. ಆದರೆ ದರ ಏರಿಕೆಯ ಬೆನ್ನಲ್ಲೇ ಮದ್ಯಪ್ರಿಯರು ಕುಡಿಯುವ ಪ್ರಮಾಣವನ್ನೇ ಕಡಿಮೆ ಮಾಡಿದ್ದು ಸರ್ಕಾಕ್ಕೆ ಶಾಕ್ ನೀಡಿದ್ದಾರೆ.
ರಾಜ್ಯ ಸರಕಾರ ಜುಲೈ ತಿಂಗಳಲ್ಲಿ ಮದ್ಯ ಹಾಗೂ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿತ್ತು. ಈ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಸುಲಭವಾಗಿ ಹಣ ಹೊಂದಾಣಿಕೆ ಮಾಡಲು ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿತ್ತು. ಆದರೆ ಮದ್ಯಪ್ರಿಯರು ಕುಡಿಯುವ ಪ್ರಮಾಣವನ್ನೇ ಕಡಿಮೆ ಮಾಡಿದ್ದು ಸರ್ಕಾರಕ್ಕೆ ಶಾಕ್ ಕೊಟ್ಟಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣವೇ ಶೇ.15ರಷ್ಟು ಕುಸಿತ ಕಂಡಿದೆ. ಹೆಚ್ಚು ಬಿಕರಿಯಾಗುತ್ತಿದ್ದ ಬಿಯರ್ ಮಾರಾಟದಲ್ಲೂ ದಿಢೀರ್ ಕುಸಿತವಾಗಿದೆ. ಮದ್ಯ ಮಾರಾಟದಿಂದ ಪ್ರತಿ ತಿಂಗಳು 2,500 ಕೋಟಿ ರೂ. ಬರುತ್ತಿದ್ದ ಆದಾಯ ಆಗಸ್ಟ್ ತಿಂಗಳಲ್ಲಿ 962 ಕೋಟಿ ರೂ.ಗೆ ಕುಸಿದಿದೆ. ಅಬಕಾರಿ ಸುಂಕ ಹೆಚ್ಚಳ ಆಗುತ್ತಿದ್ದಂತೆ ಬಾರ್, ಚಿಲ್ಲರೆ ಮದ್ಯದ ಅಂಗಡಿಗಳಲ್ಲಿ ಮಾರಾಟ ಕುಸಿದಿದ್ದು ಮದ್ಯ ಪ್ರಿಯರೇ ಕುಡಿಯುವುದನ್ನು ಕಡಿಮೆ ಮಾಡಿರುವುದು ಕಂಡುಬಂದಿದೆ.
ಇದೇ ವೇಳೆ, ಬೆಲೆ ಏರಿಕೆ ಪರಿಣಾಮ ಕಡಿಮೆ ಬೆಲೆಯ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದೆ. ಸ್ಕಾಚ್ ಕುಡಿಯುತ್ತಿದ್ದ ಸಿರಿವಂತರು ಪ್ರೀಮಿಯಮ್ ಬ್ರ್ಯಾಂಡ್ಗೆ ಶಿಫ್ಟ್ ಆಗಿದ್ದರೆ, ಪ್ರೀಮಿಯಮ್ ಬ್ರಾಂಡ್ನವರು ನಾರ್ಮಲ್ ಬ್ರ್ಯಾಂಡ್ಗೆ ಶಿಫ್ಟ್ ಆಗಿದ್ದಾರೆ. ಇದರಿಂದ ಸರ್ಕಾರದ ಆದಾಯ ಸಂಗ್ರಹದ ಮೇಲೂ ವ್ಯತಿರಿಕ್ತ ಪರಿಣಾಮ ಆಗಿದೆ.
ಹೀಗಾಗಿ ರಾಜ್ಯ ಪಾನೀಯ ನಿಗಮಕ್ಕೆ ಸಗಟು ವ್ಯಾಪಾರಿಗಳು ಮದ್ಯಕ್ಕಾಗಿ ಸಲ್ಲಿಸುವ ಖರೀದಿ ಬೇಡಿಕೆಯೂ ಒಟ್ಟಾರೆ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಮದ್ಯ ಮಾರಾಟ ಶೇ.15ರಷ್ಟು ಕುಸಿತವಾಗಿದ್ದರೆ, ಬಿಯರ್ ಶೇ.5ರಷ್ಟು ಕುಸಿದಿದೆ. ಇದು ಸರಕಾರದ ಆದಾಯ ಸಂಗ್ರಹದ ಮೇಲೆ ತೀವ್ರ ಪರಿಣಾಮ ಬೀರಿದ್ದು ಸರ್ಕಾರದ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ತೊಡಕಾಗಲಿದೆ.
The state government has increased the price of liquor to accumulate funds for the guarantee schemes that were announced by it as it assumed power. However, the liquor buyers have shocked the government by not buying liquor in quantities that was expected.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am