ಬ್ರೇಕಿಂಗ್ ನ್ಯೂಸ್
21-08-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಈಗ ಇರುವ ಎರಡೂವರೆ ವರ್ಷದ ಬದಲು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಇಂಗಿತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ₹ 10,500 ಕೋಟಿ ಮೊತ್ತದ 37,000 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ₹ 3,500 ಕೋಟಿ ಮಾತ್ರ ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ₹ 7,000 ಕೋಟಿ ಬಿಡುಗಡೆ ಮಾಡಬೇಕಿದೆ. ಹಳೆಯ ಬಾಕಿ ಬಿಲ್ ಭಾರ ಹೆಚ್ಚಿರುವುದರಿಂದ ಈ ವರ್ಷವೇ ₹ 3,500 ಕೋಟಿ ಅಗತ್ಯವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಗೆ ಶಾಸಕರಿಂದ ಮನವಿಗಳು ಬರುತ್ತಲೇ ಇವೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್ಐಡಿಎಲ್) ಅಗತ್ಯವಿಲ್ಲದಿದ್ದರೂ 800 ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು, ಈ ಹೊರೆಯನ್ನು ತಗ್ಗಿಸಬೇಕು ಎಂದು ಖರ್ಗೆ ಪ್ರಸ್ತಾಪಿಸಿದ್ದಾರೆ. ಇದಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ವರ್ಷದಿಂದ ತಲಾ ₹ 1 ಕೋಟಿ ಅನುದಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Chief Minister Siddaramaiah has proposed to amend the Act to increase the tenure of presidents of gram panchayats, taluk panchayats and zilla panchayats to five years from the existing two-and-a-half years.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm