ಬ್ರೇಕಿಂಗ್ ನ್ಯೂಸ್
21-08-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಈಗ ಇರುವ ಎರಡೂವರೆ ವರ್ಷದ ಬದಲು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಇಂಗಿತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ₹ 10,500 ಕೋಟಿ ಮೊತ್ತದ 37,000 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ₹ 3,500 ಕೋಟಿ ಮಾತ್ರ ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ₹ 7,000 ಕೋಟಿ ಬಿಡುಗಡೆ ಮಾಡಬೇಕಿದೆ. ಹಳೆಯ ಬಾಕಿ ಬಿಲ್ ಭಾರ ಹೆಚ್ಚಿರುವುದರಿಂದ ಈ ವರ್ಷವೇ ₹ 3,500 ಕೋಟಿ ಅಗತ್ಯವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಗೆ ಶಾಸಕರಿಂದ ಮನವಿಗಳು ಬರುತ್ತಲೇ ಇವೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್ಐಡಿಎಲ್) ಅಗತ್ಯವಿಲ್ಲದಿದ್ದರೂ 800 ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು, ಈ ಹೊರೆಯನ್ನು ತಗ್ಗಿಸಬೇಕು ಎಂದು ಖರ್ಗೆ ಪ್ರಸ್ತಾಪಿಸಿದ್ದಾರೆ. ಇದಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ವರ್ಷದಿಂದ ತಲಾ ₹ 1 ಕೋಟಿ ಅನುದಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Chief Minister Siddaramaiah has proposed to amend the Act to increase the tenure of presidents of gram panchayats, taluk panchayats and zilla panchayats to five years from the existing two-and-a-half years.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am