ಬ್ರೇಕಿಂಗ್ ನ್ಯೂಸ್
21-08-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಈಗ ಇರುವ ಎರಡೂವರೆ ವರ್ಷದ ಬದಲು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಇಂಗಿತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ₹ 10,500 ಕೋಟಿ ಮೊತ್ತದ 37,000 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ₹ 3,500 ಕೋಟಿ ಮಾತ್ರ ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ₹ 7,000 ಕೋಟಿ ಬಿಡುಗಡೆ ಮಾಡಬೇಕಿದೆ. ಹಳೆಯ ಬಾಕಿ ಬಿಲ್ ಭಾರ ಹೆಚ್ಚಿರುವುದರಿಂದ ಈ ವರ್ಷವೇ ₹ 3,500 ಕೋಟಿ ಅಗತ್ಯವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಗೆ ಶಾಸಕರಿಂದ ಮನವಿಗಳು ಬರುತ್ತಲೇ ಇವೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್ಐಡಿಎಲ್) ಅಗತ್ಯವಿಲ್ಲದಿದ್ದರೂ 800 ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು, ಈ ಹೊರೆಯನ್ನು ತಗ್ಗಿಸಬೇಕು ಎಂದು ಖರ್ಗೆ ಪ್ರಸ್ತಾಪಿಸಿದ್ದಾರೆ. ಇದಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ವರ್ಷದಿಂದ ತಲಾ ₹ 1 ಕೋಟಿ ಅನುದಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Chief Minister Siddaramaiah has proposed to amend the Act to increase the tenure of presidents of gram panchayats, taluk panchayats and zilla panchayats to five years from the existing two-and-a-half years.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm