Police Constable Heart Attack: ಚಾಮರಾಜನಗರ ; ಕಾವೇರಿ ನೀರು ಹೋರಾಟದ ಬಂದೋಬಸ್ತ್​​ನಲ್ಲಿದ ಪೊಲೀಸ್ ಹೆಡ್ ಕಾನ್​ಸ್ಟೇಬಲ್​​ ಹೃದಯಾಘಾತದಿಂದ ಸಾವು

25-08-23 06:03 pm       HK News Desk   ಕರ್ನಾಟಕ

ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು‌ ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೋಹನ್ (44) ಮೃತರು.

ಚಾಮರಾಜನಗರ, ಆಗಸ್ಟ್ 25: ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು‌ ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೋಹನ್ (44) ಮೃತರು.

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು. ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್​ನಲ್ಲಿ ತಂಗಿದ್ದ ಹೆಡ್​​ ಕಾನ್​ಸ್ಟೇಬಲ್​ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.‌ ಮೋಹನ್​ ಮಡಿಕೇರಿ ಜಿಲ್ಲೆಯ ನಾಪೋಕ್ಲು ಹೋಬಳಿಯ ಕಕ್ಕಬೇ ಗ್ರಾಮದವರು ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Kaveri protest, Police head constable dies of Heart attack at Chamrajnagara.