ಬ್ರೇಕಿಂಗ್ ನ್ಯೂಸ್
26-08-23 09:07 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 26; ಬಿಜೆಪಿ ಆಡಳಿತದಲ್ಲಿ ಗುತ್ತಿಗೆದಾರರು ಮಾಡಿದ್ದ 40 ಪರ್ಸೆಂಟ್ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚಿಸಿತ್ತು. ಈಗ ಆ ಸಮಿತಿ ರದ್ದುಪಡಿಸಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಅಪೇಕ್ಷಿಸಿದೆ.
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಕೇಳುತ್ತಿರುವ ಕುರಿತು ಪ್ರಧಾನ ಮಂತ್ರಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದು ರಾಷ್ಟ್ರಾದ್ಯಂತ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಇದುವರೆಗೆ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ತನಿಖೆಯ ಅಗತ್ಯವಿರುವುದನ್ನು ಮನಗಂಡು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.
Over a year after the “40 per cent commission” row erupted in Karnataka, the Congress-led state government, which came to power in May this year, has order a judicial probe into the matter.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm