ಬ್ರೇಕಿಂಗ್ ನ್ಯೂಸ್
26-08-23 09:33 pm Mangaluru Correspondent ಕರ್ನಾಟಕ
ಮಂಗಳೂರು, ಆಗಸ್ಟ್ 26: ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದೇವೆ. ಕೋರ್ಟಿನಲ್ಲಿ ಕ್ಲೀಯರ್ ಆದಕೂಡಲೇ ಗ್ರಾಪಂ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸುತ್ತೇವೆ. ರಾಜ್ಯದಲ್ಲಿ ನಾವು 20ಕ್ಕಿಂತಲೂ ಹೆಚ್ಚು ಸಂಸದ ಸ್ಥಾನಗಳನ್ನು ಗೆಲ್ಲುತ್ತೇವೆ. ಅದಕ್ಕಾಗಿ ನಾವು ಈಗಾಗಲೇ ತಯಾರಿ ಆರಂಭಿಸಿದ್ದೇವೆ. ಪ್ರತಿ ಕ್ಷೇತ್ರಕ್ಕೆ ಒಬ್ಬರು ಸಚಿವ ಮತ್ತು ಇನ್ನೊಬ್ಬ ಹಿರಿಯ ರಾಜ್ಯ ಮುಖಂಡರನ್ನು ವೀಕ್ಷಕರಾಗಿ ನೇಮಕ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಗ್ಯಾರಂಟಿ ಯೋಜನೆಯಿಂದಾಗಿ ಕಾಂಗ್ರೆಸ್ ಸರಕಾರದ ಪರವಾಗಿ ಜನಾಭಿಪ್ರಾಯ ಬದಲಾಗಿದೆ. ಮಹಿಳೆಯರು ವಿಶೇಷವಾಗಿ ಕಾಂಗ್ರೆಸ್ ಪರ ಒಲವು ತೋರಿದ್ದಾರೆ. ಮೂರು ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಗಿದ್ದು, ಇದೇ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿ ಮಾಡುತ್ತೇವೆ. ಡಿಸೆಂಬರ್ ನಲ್ಲಿ ಯುವನಿಧಿ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಇದರ ಆಧಾರದಲ್ಲಿಯೇ ನಾವು ಲೋಕಸಭೆ ಚುನಾವಣೆ ಗೆಲ್ಲುತ್ತೇವೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಎರಡು ಕ್ಷೇತ್ರಗಳನ್ನೂ ಗೆಲ್ಲಲು ತಂತ್ರಗಾರಿಕೆ ನಡೆಸಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದಾಗಿ ಬಿಜೆಪಿ ಮತ್ತೆ ಸೋಲ್ತೀವಿ ಅಂತ ಹೆದರಿಕೆಯಾಗಿದೆ. ಪರಿಷತ್ ಮತ್ತು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರನ್ನೂ ಮಾಡಿಲ್ಲ. ಪ್ರತಿಪಕ್ಷ ನಾಯಕ ಅಂದ್ರೆ ಶ್ಯಾಡೋ ಸಿಎಂ ಆಗಿದ್ದರೂ ಅದನ್ನೇ ಫಿಲ್ ಮಾಡಿಲ್ಲದಿರುವುದು ದುರ್ದೈವದ ಸಂಗತಿ ಎಂದ ಸಲೀಂ ಅಹ್ಮದ್, ಬಿಜೆಪಿಗೆ ಮತ್ತೆ ಜನರ ಬಳಿಗೆ ಹೋಗಲು ಯಾವ ನೈತಿಕತೆ ಇದೆ. ಯಾವ ಘನಕಾರ್ಯ ಮಾಡಿದ್ದಾರೆಂದು ಜನ ಇವರಿಗೆ ಓಟು ಹಾಕಬೇಕು. ಸುಳ್ಳಿಗೆ ಆಸ್ಕರ್ ನೀಡುವುದಾದರೆ ಮೋದಿಗೆ ಸಲ್ಲಬೇಕು. ಇವರು ಜನರ ಪರವಾಗಿ ಯಾವ ಕಾರ್ಯಕ್ರಮ ತಂದಿದ್ದಾರೆ. ಬೆಲೆಯೇರಿಕೆ ಮಾಡಿ ಜನರನ್ನು ಕಷ್ಟಕ್ಕೆ ದೂಡಿದ್ದಕ್ಕೆ ಓಟು ಹಾಕಬೇಕೇ.. ಮೋದಿಯವರೇ ಕೇವಲ ಮನ್ ಕೀ ಬಾತ್ ನಡೆಯಲ್ಲ. ಬಡವರಿಗೆ ಕೊಡುವ ಅಕ್ಕಿಯನ್ನೇ ಕೊಡದೆ ವಂಚಿಸಿದವರು ಇವರು. ಬಿಜೆಪಿಯವರನ್ನು ಆರು ತಿಂಗಳಲ್ಲಿ ಬೆತ್ತಲೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ನಾವು 135 ಸೀಟಿನ ಪೂರ್ಣ ಬಲ ಹೊಂದಿದ್ದೇವೆ. ಯಾವುದೇ ಆಪರೇಶನ್ ಮಾಡುವ ಅಗತ್ಯ ಇಲ್ಲ. ಅವರಾಗಿಯೇ ಕಾಂಗ್ರೆಸ್ ಪಕ್ಷವನ್ನು ಒಪ್ಪಿಕೊಂಡು ಬಂದರೆ ನಾವು ಇಲ್ಲ ಎನ್ನುವುದಿಲ್ಲ. ಕೆಲವು ಶಾಸಕರು, ಮಾಜಿ ಶಾಸಕರು ಸಿಎಂ ಮತ್ತು ಡಿಸಿಎಂ ಜೊತೆಗೆ ಮಾತನಾಡಿದ್ದಾರೆ. ಅವರ ಪಕ್ಷ ಸೇರ್ಪಡೆ ಬಗ್ಗೆ ಖರ್ಗೆ ಸಾಹೇಬ್ರು ಮತ್ತು ಡಿಕೆ ಶಿವಕುಮಾರ್ ನಿರ್ಧರಿಸಲಿದ್ದಾರೆ ಎಂದರು. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಐವಾನ್ ಲೋಬೊ, ಶಾಹುಲ್ ಹಮೀದ್ ಮತ್ತಿತರರು ಇದ್ದರು.
The Congress will expose maladministration of the Union government and also put forth before people Congress government’s successful implementation of the five guarantees to win 20 seats in the forthcoming Lok Sabha elections in State, said Karnataka Pradesh Congress Committee working president Saleem Ahmed here on Saturday, August 26.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am