ಬ್ರೇಕಿಂಗ್ ನ್ಯೂಸ್
27-08-23 07:39 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 27: ನಗರದ ಹರಿದೇವ ನಗರದಲ್ಲಿ 3 ವರ್ಷದ ಹೆಣ್ಣು ಮಗುವೊಂದು ಶನಿವಾರ ಗಣಪತಿ ಮುಳುಗಿಸುವ ಆಟವಾಡಲು ಹೋಗಿ ಮನೆ ಬಳಿ ಇದ್ದ ಸರಕಾರಿ ಬಾವಿಗೆ ಬಿದ್ದು ಮೃತಪಟ್ಟಿದೆ.
ಇಲ್ಲಿನ ಸೂರಜ ಬಂಟ್ ಎನ್ನುವವರ ಮಗಳು ಸ್ತುತಿ ಮೃತ ದುರ್ದೈವಿ. ಶನಿವಾರ ಬೆಳಗ್ಗೆ ಮಣ್ಣನ್ನು ತೆಗೆದುಕೊಂಡು ಗಣಪತಿ ಮೂರ್ತಿ ತಯಾರಿಸುತ್ತಾ ಆಟವಾಡುತ್ತಿದ್ದಳು. ಕೆಲ ಹೊತ್ತಿನ ಬಳಿಕ ಮಗುವು ಮನೆಯಿಂದ ನೂರು ಮೀಟರ್ ದೂರದಲ್ಲಿರುವ ನಗರಸಭೆಯ ಬಾವಿಗೆ ತೆರಳಿ ಗಣಪತಿಯ ವಿಸರ್ಜನೆಗೆ ಮುಂದಾಗಿದೆ. ಈ ವೇಳೆ ಬಾವಿಯ ಕಟ್ಟೆಯು ಚಿಕ್ಕವಿದ್ದ ಕಾರಣ ಕಾಲು ಜಾರಿ ಬಾವಿಗೆ ಬಿದ್ದಿದ್ದಾಳೆ.
ಮಧ್ಯಾಹ್ನ 12 ಗಂಟೆಗೆ ಮಗು ಕಾಣದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದ ಕುಟುಂಬಸ್ಥರು, ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ದೂರಿನ ಅನ್ವಯ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರೊಂದಿಗೆ ಸುಮಾರು 2 ತಾಸು ಹುಡುಕಾಡಿದ್ದಾರೆ. ಎಲ್ಲಿಯೂ ಮಗುವಿನ ಸುಳಿವು ಸಿಗದಾದಾಗ ವಾಟ್ಸಪ್ಗಳಲ್ಲಿ ಮಗುವಿನ ಫೊಟೊ ಹರಿಬಿಟ್ಟು, ಎಲ್ಲಿಯಾದರೂ ಕಂಡಲ್ಲಿ ಮಾಹಿತಿ ನೀಡಲು ಕೋರಿದ್ದಾರೆ. ಆದರೆ ಸುಮಾರು 2 ರಿಂದ 2.30ರ ಹೊತ್ತಿಗೆ ಸಾರ್ವಜನಿಕ ಬಾವಿಯಲ್ಲೊಮ್ಮೆ ನೋಡೋಣವೆಂದು ಸ್ಥಳೀಯರೊಬ್ಬರು ಇಳಿದಾಗ ಆಳದಲ್ಲಿ ಮಗುವಿನ ಮೃತದೇಹ ದೊರೆತಿದೆ.
ಮಗುವಿನ ತಾಯಿಗೆ ಈಗಾಗಲೇ ಒಂದು ವರ್ಷದ ಮತ್ತೊಂದು ಮಗು ಇದೆ. ತಂದೆ ಕೊರಿಯರ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಹೋದವರು ವಾಪಸ್ಸು ಬಂದಿರಲಿಲ್ಲ. ತಾಯಿ ಚಿಕ್ಕ ಮಗುವಿಗೆ ಹಾಲುಣಿಸಿ ಮಲಗಿಸಿ ಬರುವಷ್ಟರಲ್ಲಿಈ ಘಟನೆ ನಡೆದಿದೆ. ಪ್ರಕರಣ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಗರಸಭೆಯಿಂದ ಎರಡು ಸಾರ್ವಜನಿಕ ಬಾವಿ ತೆರೆಯಲಾಗಿದೆ. ಒಂದು ಬಾವಿಗೆ ಸ್ಥಳೀಯರ ದೂರಿನ ಮೇರೆಗೆ ಎತ್ತರಕ್ಕೆ ಕಟ್ಟೆ ಕಟ್ಟಿದ್ದು, ಯಾವುದೇ ಅಪಾಯ ಎದುರಾಗದಂತೆ ಮಾಡಲಾಗಿದೆ. ಆದರೆ ಮತ್ತೊಂದು ಬಾವಿಗೆ ಹಾಗೇ ಬಿಡಲಾಗಿದೆ. ಕಟ್ಟೆ ಒಂದು ಅಡಿಯಷ್ಟು ಮಾತ್ರ ಎತ್ತರವಿವೆ. ಬಾವಿಗೆ ಕಟ್ಟೆ ಕಟ್ಟಿ ಗ್ರಿಲ್ಸ್ ಅಳವಡಿಸಲು ಸಿಮೆಂಟ್, ಮರಳನ್ನು ವರ್ಷಗಳ ಹಿಂದೆ ತಂದು ಬಾವಿ ಬಳಿ ಇಡಲಾಗಿದೆ. ಆದರೆ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ನಿರ್ಲಕ್ಷ್ಯದಿಂದ ಗ್ರಿಲ್ಸ್ ಅಥವಾ ಕಟ್ಟೆ ನಿರ್ಮಿಸಿಲ್ಲ ಎಂದು ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a tragic incident, a three-year-old child died after accidentally falling into a public well while playing on Saturday afternoon, in Haridev Nagar, Karwar. The deceased child has been identified as Stuti (3) daughter of Sooraj Bunt.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm