ಬ್ರೇಕಿಂಗ್ ನ್ಯೂಸ್
29-08-23 01:02 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 29: ಕಳೆದ ಅವಧಿಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಹಗರಣದ ತನಿಖೆ ವಿಚಾರದಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ. ಪಿಎಸ್ಐ ಹಗರಣ, 40% ಹಗರಣ, ಕೋವಿಡ್ ಹಗರಣ ಎಲ್ಲವನ್ನೂ ತನಿಖೆಗೆ ಒಳಪಡಿಸಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡದೆ ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕಾ? ಅವರ ಕಾಲದಲ್ಲೇ ಹಗರಣದ ತನಿಖೆಗೆ ಆಗ್ರಹಿಸಿದ್ದೇವೆ. ಅವರು ತನಿಖೆ ಮಾಡಿಸಲಿಲ್ಲ. ಹೀಗಾಗಿ ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ 100 ದಿನ ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ ಎಂದ ಸಿದ್ದರಾಮಯ್ಯ, ದೇಶದ ಇತಿಹಾಸದಲ್ಲೇ ಒಂದು ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.
![]()
ಡಿ.ಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವಿನ ಸಂಬಂಧದ ಬಗ್ಗೆ ವಿಪಕ್ಷಗಳು ಟೀಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷಗಳು ಎಷ್ಟು ನಮ್ಮನ್ನ ದೂರ ಮಾಡಲು ಯತ್ನ ಮಾಡುತ್ತಿದ್ಧಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದರು.
ಇದೇ ಪ್ರಶ್ನೆಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿರೋಧ ಪಕ್ಷಗಳು ನಮ್ಮ ಸಂಬಂಧ, ವಿಚಾರ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಾ ಇರುತ್ತೀರಿ ಎಂದು ಹೇಳಿದರು.
CM Siddaramaiah says all charges of corruption against BJP will be investigated. No Target all that are involved in corruption charges they will be taken action he added in Mysuru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm