ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am