ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm