ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm