ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm