ಬ್ರೇಕಿಂಗ್ ನ್ಯೂಸ್
31-08-23 05:22 pm Bangalore Correspondent ಕರ್ನಾಟಕ
ಬೆಂಗಳೂರು, ಆ.31: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಪಕ್ಷದ ಮುಖಂಡ ಎಚ್ ಪಿ ಸುದಾಮ್ ದಾಸ್ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧ ಬಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭಾಪತಿ ಅವರು ನೂತನ ಸದಸ್ಯರಿಗೆ ಸಂಪ್ರದಾಯದಂತೆ ವಿಧಾನ ಪರಿಷತ್ತಿನ ನಡಾವಳಿ ಪುಸ್ತಕ ಒಳಗೊಂಡ ಸೂಟ್ ಕೇಸ್ ನೀಡಿ ಶುಭ ಹಾರೈಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸದಸ್ಯರಿಗೆ ಹೂಗುಚ್ಚ ನೀಡಿ ಸಿಹಿ ತಿನ್ನಿಸಿ ಶುಭಾಶಯ ಕೋರಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಹಲವು ಶಾಸಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಂ.ಆರ್. ಸೀತಾರಾಂ ಅವರ ಪತ್ನಿ ಶೃತಿ ಸೀತಾರಾಂ, ಪುತ್ರ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಅವರ ಪತ್ನಿ ಆಶಿತ ರಕ್ಷಾ ರಾಮಯ್ಯ, ಮತ್ತೋರ್ವ ಪುತ್ರ ಸುಂದರ್ ರಾಮ್ ಭಾಗವಹಿಸಿದ್ದರು.
ಎಂ.ಆರ್. ಸೀತಾರಾಂ ಅವರ ಮೊಮ್ಮಗ, ರಕ್ಷಾ ರಾಮಯ್ಯ ಅವರ ಪುತ್ರ ಸಮ್ಮರ್ ರಾಮಯ್ಯ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿಕೊಂಡು ಇದೇ ಸಂದರ್ಭದಲ್ಲಿ ಆಶೀರ್ವದಿಸಿದ್ದು ವಿಶೇಷವಾಗಿತ್ತು.
ಮಾಜಿ ಸಚಿವೆ ಉಮಾಶ್ರೀಗೆ ಒಲಿದ ಅದೃಷ್ಟ ;
ಏತನ್ಮಧ್ಯೆ ಪಟ್ಟಿಯಲ್ಲಿ ಮನ್ಸೂರ್ ಅಲಿ ಖಾನ್ ಅವರ ಹೆಸರಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿಅವರ ಬದಲಿಗೆ ಮಾಜಿ ಸಚಿವೆ ಉಮಾಶ್ರೀ ಅವರನ್ನು ಪರಿಗಣಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರಿಗೆ ಮನವಿ ಮಾಡಿದ್ದರು. ಹಿಂದೆ ತೇರದಾಳ ಕ್ಷೇತ್ರದ ಶಾಸಕಿಯಾಗಿದ್ದ ಉಮಾಶ್ರೀ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಅದೇ ಕ್ಷೇತ್ರದಿಂದ ಕಣಕ್ಕಿಳಿಯಲು ಉತ್ಸುಕವಾಗಿದ್ದರು. ಆ ವೇಳೆ ಅವರಿಗೆ ಪರಿಷತ್ ಸ್ಥಾನದ ಭರವಸೆ ನೀಡಲಾಗಿತ್ತು ಎಂದು ಹೇಳಲಾಗಿದೆ.
Former ministers M.R. Seetharam, actor Umashree and former Enforcement Directorate officer H.P. Sudham Das took oath as members of the Legislative Council of Karnataka on August 31.Council Chairman Basavaraj Horatti administered the oath of office in the presence of Chief Minister Siddaramaiah and Law and Parliamentary Affairs Minister H.K. Patil.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm