ಬ್ರೇಕಿಂಗ್ ನ್ಯೂಸ್
31-08-23 05:22 pm Bangalore Correspondent ಕರ್ನಾಟಕ
ಬೆಂಗಳೂರು, ಆ.31: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಪಕ್ಷದ ಮುಖಂಡ ಎಚ್ ಪಿ ಸುದಾಮ್ ದಾಸ್ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧ ಬಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭಾಪತಿ ಅವರು ನೂತನ ಸದಸ್ಯರಿಗೆ ಸಂಪ್ರದಾಯದಂತೆ ವಿಧಾನ ಪರಿಷತ್ತಿನ ನಡಾವಳಿ ಪುಸ್ತಕ ಒಳಗೊಂಡ ಸೂಟ್ ಕೇಸ್ ನೀಡಿ ಶುಭ ಹಾರೈಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸದಸ್ಯರಿಗೆ ಹೂಗುಚ್ಚ ನೀಡಿ ಸಿಹಿ ತಿನ್ನಿಸಿ ಶುಭಾಶಯ ಕೋರಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಹಲವು ಶಾಸಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಂ.ಆರ್. ಸೀತಾರಾಂ ಅವರ ಪತ್ನಿ ಶೃತಿ ಸೀತಾರಾಂ, ಪುತ್ರ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಅವರ ಪತ್ನಿ ಆಶಿತ ರಕ್ಷಾ ರಾಮಯ್ಯ, ಮತ್ತೋರ್ವ ಪುತ್ರ ಸುಂದರ್ ರಾಮ್ ಭಾಗವಹಿಸಿದ್ದರು.
ಎಂ.ಆರ್. ಸೀತಾರಾಂ ಅವರ ಮೊಮ್ಮಗ, ರಕ್ಷಾ ರಾಮಯ್ಯ ಅವರ ಪುತ್ರ ಸಮ್ಮರ್ ರಾಮಯ್ಯ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿಕೊಂಡು ಇದೇ ಸಂದರ್ಭದಲ್ಲಿ ಆಶೀರ್ವದಿಸಿದ್ದು ವಿಶೇಷವಾಗಿತ್ತು.
ಮಾಜಿ ಸಚಿವೆ ಉಮಾಶ್ರೀಗೆ ಒಲಿದ ಅದೃಷ್ಟ ;
ಏತನ್ಮಧ್ಯೆ ಪಟ್ಟಿಯಲ್ಲಿ ಮನ್ಸೂರ್ ಅಲಿ ಖಾನ್ ಅವರ ಹೆಸರಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿಅವರ ಬದಲಿಗೆ ಮಾಜಿ ಸಚಿವೆ ಉಮಾಶ್ರೀ ಅವರನ್ನು ಪರಿಗಣಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರಿಗೆ ಮನವಿ ಮಾಡಿದ್ದರು. ಹಿಂದೆ ತೇರದಾಳ ಕ್ಷೇತ್ರದ ಶಾಸಕಿಯಾಗಿದ್ದ ಉಮಾಶ್ರೀ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಅದೇ ಕ್ಷೇತ್ರದಿಂದ ಕಣಕ್ಕಿಳಿಯಲು ಉತ್ಸುಕವಾಗಿದ್ದರು. ಆ ವೇಳೆ ಅವರಿಗೆ ಪರಿಷತ್ ಸ್ಥಾನದ ಭರವಸೆ ನೀಡಲಾಗಿತ್ತು ಎಂದು ಹೇಳಲಾಗಿದೆ.
Former ministers M.R. Seetharam, actor Umashree and former Enforcement Directorate officer H.P. Sudham Das took oath as members of the Legislative Council of Karnataka on August 31.Council Chairman Basavaraj Horatti administered the oath of office in the presence of Chief Minister Siddaramaiah and Law and Parliamentary Affairs Minister H.K. Patil.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm