ಬ್ರೇಕಿಂಗ್ ನ್ಯೂಸ್
31-08-23 05:22 pm Bangalore Correspondent ಕರ್ನಾಟಕ
ಬೆಂಗಳೂರು, ಆ.31: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಪಕ್ಷದ ಮುಖಂಡ ಎಚ್ ಪಿ ಸುದಾಮ್ ದಾಸ್ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧ ಬಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಭಾಪತಿ ಅವರು ನೂತನ ಸದಸ್ಯರಿಗೆ ಸಂಪ್ರದಾಯದಂತೆ ವಿಧಾನ ಪರಿಷತ್ತಿನ ನಡಾವಳಿ ಪುಸ್ತಕ ಒಳಗೊಂಡ ಸೂಟ್ ಕೇಸ್ ನೀಡಿ ಶುಭ ಹಾರೈಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸದಸ್ಯರಿಗೆ ಹೂಗುಚ್ಚ ನೀಡಿ ಸಿಹಿ ತಿನ್ನಿಸಿ ಶುಭಾಶಯ ಕೋರಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಹಲವು ಶಾಸಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಂ.ಆರ್. ಸೀತಾರಾಂ ಅವರ ಪತ್ನಿ ಶೃತಿ ಸೀತಾರಾಂ, ಪುತ್ರ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಅವರ ಪತ್ನಿ ಆಶಿತ ರಕ್ಷಾ ರಾಮಯ್ಯ, ಮತ್ತೋರ್ವ ಪುತ್ರ ಸುಂದರ್ ರಾಮ್ ಭಾಗವಹಿಸಿದ್ದರು.
ಎಂ.ಆರ್. ಸೀತಾರಾಂ ಅವರ ಮೊಮ್ಮಗ, ರಕ್ಷಾ ರಾಮಯ್ಯ ಅವರ ಪುತ್ರ ಸಮ್ಮರ್ ರಾಮಯ್ಯ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿಕೊಂಡು ಇದೇ ಸಂದರ್ಭದಲ್ಲಿ ಆಶೀರ್ವದಿಸಿದ್ದು ವಿಶೇಷವಾಗಿತ್ತು.
ಮಾಜಿ ಸಚಿವೆ ಉಮಾಶ್ರೀಗೆ ಒಲಿದ ಅದೃಷ್ಟ ;
ಏತನ್ಮಧ್ಯೆ ಪಟ್ಟಿಯಲ್ಲಿ ಮನ್ಸೂರ್ ಅಲಿ ಖಾನ್ ಅವರ ಹೆಸರಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿಅವರ ಬದಲಿಗೆ ಮಾಜಿ ಸಚಿವೆ ಉಮಾಶ್ರೀ ಅವರನ್ನು ಪರಿಗಣಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರಿಗೆ ಮನವಿ ಮಾಡಿದ್ದರು. ಹಿಂದೆ ತೇರದಾಳ ಕ್ಷೇತ್ರದ ಶಾಸಕಿಯಾಗಿದ್ದ ಉಮಾಶ್ರೀ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಅದೇ ಕ್ಷೇತ್ರದಿಂದ ಕಣಕ್ಕಿಳಿಯಲು ಉತ್ಸುಕವಾಗಿದ್ದರು. ಆ ವೇಳೆ ಅವರಿಗೆ ಪರಿಷತ್ ಸ್ಥಾನದ ಭರವಸೆ ನೀಡಲಾಗಿತ್ತು ಎಂದು ಹೇಳಲಾಗಿದೆ.
Former ministers M.R. Seetharam, actor Umashree and former Enforcement Directorate officer H.P. Sudham Das took oath as members of the Legislative Council of Karnataka on August 31.Council Chairman Basavaraj Horatti administered the oath of office in the presence of Chief Minister Siddaramaiah and Law and Parliamentary Affairs Minister H.K. Patil.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm