ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am