ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm