ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm