ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm