ಬ್ರೇಕಿಂಗ್ ನ್ಯೂಸ್
01-09-23 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆ ಅನೂರ್ಜಿತಗೊಂಡಿದೆ. ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿ ಅನೂರ್ಜಿತಗೊಳಿಸಿದೆ. ಪ್ರಜ್ವಲ್ ರೇವಣ್ಣ ಈಗ ಅನರ್ಹತೆ ಭೀತಿಯಲ್ಲಿದೆ. ಲೋಕಸಭಾ ಚುನಾವಣೆಗೆ 6 ತಿಂಗಳು ಇರುವಾಗ ಆಯ್ಕೆ ಅಸಿಂಧುವಾಗಿರುವುದು, ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.
ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಪೀಠದಿಂದ ಆದೇಶ ಪ್ರಕಟವಾಗಿದೆ. ಹಾಲಿ ಜೆಡಿಎಸ್ ಶಾಸಕರಾಗಿರುವ ಎ ಮಂಜು ತಾವು ಬಿಜೆಪಿಯಲ್ಲಿದ್ದಾಗ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಮಂಜು ಮನವಿ ಪುರಸ್ಕರಿಸಲು ನ್ಯಾಯಾಲಯ ನಿರಾಕರಿಸಿದೆ. ಅರ್ಜಿದಾರರು ಚುನಾವಣಾ ಅಕ್ರಮ ಎಸಗಿರುವುದರಿಂದ ಅವರನ್ನೂ ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗದು ಎಂದು ನ್ಯಾಯಾಲಯ ಆದೇಶಿಸಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದರು ಎಂದು ಆರೋಪಿಸಲಾಗಿತ್ತು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಎ ಮಂಜು ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಆಯೋಗವು ಕೂಡ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು. ಹಲವು ವಿಚಾರಣೆಗಳನ್ನು ಕೂಡ ನಡೆಸಲಾಗಿತ್ತು.
ಒಂದು ವೇಳೆ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಗೊಳಿಸಿದರೆ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ ಎರಡನೇ ಅಭ್ಯರ್ಥಿಯಾಗಿರುವ ತಮ್ಮನ್ನೇ ಆಯ್ಕೆಯಾದ ಅಭ್ಯರ್ಥಿ ಎಂದು ಪರಿಗಣಿಸಬೇಕು ಎಂದು ಎ ಮಂಜು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ದೇವರಾಜೇಗೌಡ ಅವರಿಂದ ಕೂಡ ದೂರು!
ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ ದೇವರಾಜೇಗೌಡ 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಅವರು ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿ ದೇವರಾಜೇಗೌಡ ತಮ್ಮ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.
ಪ್ರಜ್ವಲ್ ರೇವಣ್ಣಗೆ ಅನರ್ಹತೆ ಭೀತಿ
ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿಸಿರುವ ಕಾರಣ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬಹುದು. ಹಾಗಾಗಿ, ಈಗ ಪ್ರಜ್ವಲ್ ರೇವಣ್ಣ ಅವರು 30 ದಿನಗಳ ಒಳಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಅಲ್ಲಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯವಾಗಿದೆ. ಒಂದು ವೇಳೆ ಅನರ್ಹಗೊಂಡರೆ 6 ವರ್ಷ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
The Karnataka High Court has disqualified JD(S) leader Prajwal Revanna as a Member of Parliament from the Hassan district over irregularities in his 2019 general poll affidavit. The decision was made by a single bench judge, K Natrajan.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm