ಬ್ರೇಕಿಂಗ್ ನ್ಯೂಸ್
01-09-23 06:13 pm HK News Desk ಕರ್ನಾಟಕ
ಕೋಲಾರ, ಸೆಪ್ಟೆಂಬರ್ 1: ಮಾನವ ಹಕ್ಕು ಸಂಘಟನೆ ಹೆಸರಲ್ಲಿ ವಿಧವೆ ಮಹಿಳೆಯೊಬ್ಬರಿಗೆ 15 ಲಕ್ಷ ರೂಪಾಯಿ ಹಣ ವಂಚನೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಈ ಕುರಿತು ವಂಚನೆಗೊಳಗಾದ ಬೆಂಗಳೂರು ಕಾಡುಗೋಡಿ ಮೂಲದ ಮಹಿಳೆ ಶಾಂತಕುಮಾರಿ ಎಂಬುವರು 15 ಲಕ್ಷ lರೂಪಾಯಿ ವಂಚನೆ ಮಾಡಿರುವ ನ್ಯಾಷನಲ್ ಆ್ಯಂಟಿ ಕ್ರೈಂ ಮತ್ತು ಹ್ಯೂಮನ್ ರೈಟ್ಸ್ ಸಂಘಟನೆಯ ರಾಜ್ಯಾಧ್ಯಕ್ಷ ಜಾನ್ ಸಾಮುವೆಲ್ ಕಿಮ್, ಜೆ ವಿರುದ್ಧ ಕೋಲಾರ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಜೊತೆಗೆ ಸಂಘಟನೆ ಹೆಸರಲ್ಲಿ ಅಮಾಯಕ ಜನರನ್ನು ವಂಚಿಸುತ್ತಿರುವ ವ್ಯಕ್ತಿ ವಿರುದ್ಧ ಕ್ರಮ ಕೈಗೊಂಡು ನಮ್ಮ ಹಣ ವಾಪಸ್ ಕೊಡಿಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವಂಚನೆಗೊಳಗಾದ ಮಹಿಳೆ ಶಾಂತಕುಮಾರಿ, ಜಾನ್ ಸಾಮುವೆಲ್ ಎಂಬುವರು ಹ್ಯೂಮನ್ ರೈಟ್ಸ್ ಸಂಘಟನೆ ಹೆಸರಲ್ಲಿ ಅಮಾಯಕ ಜನರನ್ನು ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನಾನು ಸೇರಿದಂತೆ ಹಲವಾರು ಜನ ಇವನ ವಂಚನೆಗೆ ಒಳಗಾಗಿದ್ದು ಮತ್ತಷ್ಟು ಜನ ಜಾನ್ ಸಾಮುವೆಲ್ ಮೋಸದ ಜಾಲಕ್ಕೆ ಸಿಲಕಬಾರದು ಎಂದು ಪೋಲಿಸರಿಗೆ ದೂರ ನೀಡಲಾಗಿದೆ ಹಾಗೆಯೇ ಇವರ ವಿರುದ್ಧ ಜನರು ಎಚ್ಚೆತ್ತುಕೊಳ್ಳಬೇಕೆಂದು ಹೋರಾಟ ಮಾಡಲು ಮುಂದೆ ಬಂದಿದ್ದೇನೆ ಎಂದರು.
ಪರಿಚಯಸ್ಥರ ಮೂಲಕ ಇವರು ಸಂಘಟನೆ ಸೇರಿದ ವೇಳೆ ನನಗೆ ಪೊಲೀಸ್ ಹಿರಿಯ ಅಧಿಕಾರಿಗಳು, ಸಚಿವರು, ಅಧಿಕಾರಿಗಳು, ನ್ಯಾಯಾಧೀಶರು ಪರಿಚಯ ಇದ್ದಾರೆಂದು ನಮ್ಮನ್ನು ನಂಬಿಕೆ ಬರುವಂತೆ ಮಾತನಾಡಿದ ವೇಳೆ ತಕರಾರು ಇದ್ದ ನಮ್ಮ ಜಮೀನಿನ ಸಮಸ್ಯೆ ಹೇಳಿದಾಗ ನನಗೆ ತಹಸೀಲ್ದಾರ್ ಗೊತ್ತು ಕೂಡಲೇ ಬಗೆಹರಿಸುತ್ತೇನೆ ಎಂದು ಹೇಳಿದ್ದನ್ನು ನಂಬಿ ತನ್ನ ಮನೆಯ ದಾಖಲೆಗಳನ್ನು ಬ್ಯಾಂಕ್ ನಲ್ಲಿಟ್ಟು ಸಾಲ ಪಡೆದು ಏಳು ಲಕ್ಷ ಹಣ ಕೊಟ್ಟಿದೆ.
ನಂತರ ಗಾರ್ಮೆಂಟ್ಸ್ ಫ್ಯಾಕ್ಟರಿ ಮಾಡಿಕೊಡುತ್ತೇನೆ ಎಂದು ಹೇಳಿ ಮತ್ತೆ 5 ಲಕ್ಷ ರೂಪಾಯಿ ಹಣ ಪಡೆದುಕೊಂಡ. ನಂತರ ತಮ್ಮ ಮನೆಯ ಪತ್ರಗಳ ಮೇಲೆ ಸಹಿ ಹಾಕಿಸಿಕೊಂಡು ಇದೀಗ ನಾವು ವಾಸವಿರುವ ಮನೆಯನ್ನು ಯಾರಿಗೋ ಮಾರಾಟ ಮಾಡಲು ಸಂಚು ರೂಪಿಸಿದ್ದಾರೆ.
ಹಲವರು ಈತನಿಂದ ಮೋಸ ;
ಅನುಮಾನ ಬಂದ ಜಾನ್ ಸಾಮುವೆಲ್ ವಿರುದ್ಧ ಪರಿಶೀಲನೆ ನಡೆಸಿದಾಗ ಹಲವಾರು ಮಹಿಳೆಯರು ಇವನಿಂದ ಮೋಸ ಹೋಗಿದ್ದಾರೆ ಎಂಬುದು ತಿಳಿದು ಬಂದಿದೆ. ವಂಚನೆಗೊಳಗಾದವರು ಇವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದರೆ ಬೆದರಿಕೆ ಒಡ್ಡುವ ಕೆಲಸ ಮಾಡುತ್ತಿದ್ದಾನೆ ಎಂದು ಆಪಾದಿಸಿದರು. ಸಂಘಟನೆ ಹೆಸರಲ್ಲಿ ಜನರು ಮೋಸ ಹೋಗಬಾರದು ಅದು ನಿಜವಾದ ಹ್ಯೂಮನ್ ರೈಟ್ಸ್ ಸಂಘಟನೆ ಅಲ್ಲ ನಕಲಿ ಸಂಘಟನೆ ಎಂದು ಮನವಿ ಮಾಡಿದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕಿರಣಬಾಬು, ಸುಂದರ್ ರಾಜು ಉಪಸ್ಥಿತರಿದ್ದರು.
National Anti crime and Human rights of india president John Samuel Kim from Kolar alleged of fraud of 15 lakhs, case filed in Bangalore. Shanthakumari from Bangalore has filed a cheating case in the name of Human rights against John Samuel.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm