ಬ್ರೇಕಿಂಗ್ ನ್ಯೂಸ್
01-09-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಖಾಸಗಿ ಟಿವಿ ವಾಹಿನಿಗೆ ಸಂದರ್ಶನ ನೀಡಿರುವ ರೇಣುಕಾಚಾರ್ಯ, ತಾನೇ ಮುಖ್ಯಮಂತ್ರಿ ಆಗಬೇಕೆಂದು ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡಿದರು. ಸಿಎಂ ಪಟ್ಟದ ಮೇಲೆ ಕಣ್ಣಿಟ್ಟು 72 ಹೊಸ ಮುಖಗಳಿಗೆ ಟಿಕೆಟ್ ಕೊಟ್ಟಿದ್ದರು. ಎಲ್ಲ ಹಿರಿಯ ನಾಯಕರನ್ನು ಟಿಕೆಟ್ ಕೊಡದೆ ಬದಿಗೆ ಸರಿಸಿದರು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಶಾಸಕರ ಸಭೆ ನಡೆಸಿರುವ ಬಿ.ಎಲ್. ಸಂತೋಷ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೇಣುಕಾಚಾರ್ಯ, ಬಿ.ಎಸ್ ಯಡಿಯೂರಪ್ಪನವರನ್ನು ಕಡೆಗಣಿಸಿ ಇಡೀ ರಾಜ್ಯದಲ್ಲಿ ಪಕ್ಷವನ್ನು ತಲೆಯೆತ್ತದ ರೀತಿ ಮಾಡಿದರು. ಪಕ್ಷದ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದೇ ಸಂತೋಷ್ ಎಂದು ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್ ಪಕ್ಷಕ್ಕಾಗಿ ಜೀವ ತೇಯ್ದವರು. ಅವರ ತಂದೆ ಶಿವಪ್ಪ ಜನಸಂಘದ ಕಾಲದಿಂದಲೂ ಪಕ್ಷವನ್ನು ಕಟ್ಟಿ ಬೆಳೆಸಿದವರು. ಶೆಟ್ಟರ್ ಶಾಸಕನಾಗಿ, ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ಅಂಥವರಿಗೆ ಟಿಕೆಟ್ ನೀಡಲಿಲ್ಲ. ಕುರುಬ ಜನಾಂಗದಿಂದ ಪಕ್ಷದಲ್ಲಿ ಏಕೈಕ ಪ್ರತಿನಿಧಿಯಾಗಿದ್ದ, ಹಿರಿಯ ನಾಯಲ ಕೆಎಸ್ ಈಶ್ವರಪ್ಪ ಅವರನ್ನು ಟಿಕೆಟ್ ಕೊಡದೆ ಬದಿಗೆ ಸರಿಸಿದರು. ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ ಅವರಿಗೂ ಸಂತೋಷ್ ಟಿಕೆಟ್ ಸಿಗದಂತೆ ಮಾಡಿದರು. ಯಡಿಯೂರಪ್ಪನವರನ್ನು ದ್ವೇಷಿಸುತ್ತಿದ್ದವರಿಗೆ ಮಾತ್ರ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಮತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಲಾಗುತಿತ್ತು.

ತಾನು ಮುಖ್ಯಮಂತ್ರಿ ಆಗಬೇಕೆನ್ನುವ ಏಕೈಕ ಉದ್ದೇಶದಿಂದ ಸಂತೋಷ್ ಗುಂಪುಗಾರಿಕೆ ನಡೆಸಿದ್ದರು. ರಾಜ್ಯದಲ್ಲಿ ತನ್ನದೇ ಪಟಾಲಂ ಕಟ್ಟಿಕೊಂಡು 72 ಹೊಸಮುಖಗಳಿಗೆ ಟಿಕೆಟ್ ಕೊಡಿಸಿದ್ದರು. ಇದು ಯಾಕೆ ಕೊಡಬೇಕಿತ್ತು. ತನ್ನದೇ ನಡೆಯಬೇಕೆಂದು ಹೀಗೆಲ್ಲ ಮಾಡಿದ್ರು. ನೇಮಿರಾಜ ನಾಯ್ಕ ಜೆಡಿಎಸ್ ಹೋಗಿ ಗೆಲ್ತಾರೆ. ಬೊಮ್ಮಾಯಿ ಅವರು ಸಿಎಂ ಆದ್ರೂ ಅವರನ್ನು ಸರಿಯಾಗಿ ಆಡಳಿತ ಮಾಡಲು ಬಿಡಲಿಲ್ಲ. ಕೈಕಟ್ಟಿ ಹಾಕಿದ್ರು. ನಾವು ಮೋದಿ, ಅಮಿತ್ ಷಾ ಭೇಟಿ ಆಗಬೇಕೆಂದು ಕೇಳಿದರೆ ಅವಕಾಶ ನೀಡಲಿಲ್ಲ. ನಾನು ಜಾತಿವಾದಿ ಅಲ್ಲ. ಯಡಿಯೂರಪ್ಪ ಅವರನ್ನು ಜಾತಿಯ ಕಾರಣಕ್ಕೆ ಬೆಂಬಲಿಸೋದಲ್ಲ.
ನಾನೊಬ್ಬ ಜಾತ್ಯತೀತ ವ್ಯಕ್ತಿ. ಹೋರಾಟ ಮಾಡಿಕೊಂಡು ಮೇಲೆ ಬಂದವನು. ಹೊನ್ನಾಳಿ ಕ್ಷೇತ್ರದಲ್ಲಿ ಎರಡು ಸಾವಿರದಷ್ಟು ಲಿಂಗಾಯತ ವೋಟ್ ಇರೋದು. ವಿಶ್ವ ಹಿಂದು ಪರಿಷತ್ತಿನೊಂದಿಗೆ ಹೋರಾಟ ಮಾಡಿ ಮೇಲೆ ಬಂದೀನಿ. ಯಡಿಯೂರಪ್ಪ ನನಗೆ ರಾಜಕೀಯದಲ್ಲಿ ಗಾಡ್ ಫಾದರ್. ಬಿಜೆಪಿ ತಾಯಿ ಇದ್ದಂತೆ. ಈಗಲೂ ಹೇಳ್ತೇನೆ, ಯಡಿಯೂರಪ್ಪ ಅವರಿಗೆ ನಾಯಕತ್ವ ಕೊಟ್ಟರೆ ಲೋಕಸಭೆ ಗೆಲ್ತೇವೆ, ಈ ಮಾತನ್ನು ಅಮಿತ್ ಷಾ ಅವರಿಗೂ ಹೇಳ್ತೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಅವರೆಲ್ಲ ಜನರನ್ನು ಎದುರಿಸಿ ಗೆದ್ದು ಬಂದವರಲ್ಲ. ಅವರೊಂದು ಗ್ಯಾಂಗ್ ಕಟ್ಟಿಕೊಂಡಿದ್ದಾರೆ. ಯಾರು ಕೂಡ ಜನರಿಂದ ಆಯ್ಕೆ ಆದವರಿಲ್ಲ. ಪಾರ್ಟಿ ಕಟ್ಟಿದವರಲ್ಲ ಎಂದು ಸಂತೋಷ್ ಹೆಸರೇಳದೆ ನೇರ ವಾಗ್ದಾಳಿ ನಡೆಸಿದ್ದಾರೆ.
In an all-out attack on BJP general secretary (organisation) BL Santhosh, former minister MP Renukacharya on Friday accused him of sidelining four-time Chief Minister BS Yediyurappa. Blaming Santhosh for the party’s defeat in the Karnataka Assembly polls, Renukacharya said that several leaders were denied tickets as the former had set his eyes on the Chief Minister’s chair.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm