ಬ್ರೇಕಿಂಗ್ ನ್ಯೂಸ್
08-09-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆಯಾಗಬೇಕೆಂದು ಹೈಕೋರ್ಟಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶರು ಪರಿಗಣಿಸಲು ಒಪ್ಪಿಗೆ ನೀಡಿಲ್ಲ. ಬದಲಿಗೆ, ಮೂಲ ಅರ್ಜಿದಾರರು, ಸಂತ್ರಸ್ತ ಕುಟುಂಬ ಅಥವಾ ಸರಕಾರ ಮಾತ್ರ ಮರು ತನಿಖೆಗೆ ಮನವಿ ಮಾಡಬಹುದೆಂದು ಹೇಳಿದೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗಿರೀಶ್ ಭಾರದ್ವಾಜ್, ನವೀನ್ ಕುಮಾರ್ ನೆರಿಯ ಮತ್ತು ವಿನಾಯಕ ಫ್ರೆಂಡ್ಸ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಧೀಶರು ವಿಚಾರಣೆಗೆ ಸ್ವೀಕರಿಸಿದ್ದರು. ಇವರ ಪರವಾಗಿ ಪುತ್ತೂರಿನ ವಕೀಲ ಅರುಣ್ ಶ್ಯಾಮ್ ವಕಾಲತ್ತು ಮಂಡಿಸಿದ್ದರು.
ಆದರೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮೂರನೇ ವ್ಯಕ್ತಿಯ ಕೋರಿಕೆ ಮೇರೆಗೆ ಒಂದು ಪ್ರಕರಣವನ್ನು ಮರು ತನಿಖೆ ಮಾಡಲು ಅವಕಾಶ ಇರುವುದಿಲ್ಲ. ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶ ಇದೆ. ಅದು ಬಿಟ್ಟರೆ ಸಾರ್ವಜನಿಕರ ಹಕ್ಕೊತ್ತಾಯ, ಜನಾಕ್ರೋಶಕ್ಕೆ ಮಣಿದು ರಾಜ್ಯ ಸರಕಾರವೂ ಈ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ ನ್ಯಾಯಾಧೀಶರು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಹಾಗೆಂದು ಕೋರ್ಟಿನ ತೀರ್ಪಿನ ವಿರುದ್ಧ ಸಭೆ, ಸಮಾರಂಭ, ಧರಣಿ ಅಥವಾ ಜನರ ಭಾವನೆಗಳನ್ನು ಪರಿಗಣಿಸಿ ಕೋರ್ಟ್ ಕಾನೂನು ಚೌಕಟ್ಟನ್ನು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ, ಕಾನೂನು ಮಿತಿಯಲ್ಲಿ ವ್ಯವಹರಿಸಬೇಕಾಗುತ್ತದೆ. ಇದರ ಬದಲು ಸಂತ್ರಸ್ತ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡುವಂತೆ ಇಬ್ಬರು ನ್ಯಾಯಾಧೀಶರಿದ್ದ ವಿಭಾಗೀಯ ಪೀಠ ಸಲಹೆ ಮಾಡಿದೆ.
Sowjanya rape case, No third party allowed for re-investigation, PIL petition dismissed in High Court. The judge did not agree to consider the public interest petition submitted to the High Court for a re-investigation in the Sowjanya murder case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm