ಬ್ರೇಕಿಂಗ್ ನ್ಯೂಸ್
08-09-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆಯಾಗಬೇಕೆಂದು ಹೈಕೋರ್ಟಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶರು ಪರಿಗಣಿಸಲು ಒಪ್ಪಿಗೆ ನೀಡಿಲ್ಲ. ಬದಲಿಗೆ, ಮೂಲ ಅರ್ಜಿದಾರರು, ಸಂತ್ರಸ್ತ ಕುಟುಂಬ ಅಥವಾ ಸರಕಾರ ಮಾತ್ರ ಮರು ತನಿಖೆಗೆ ಮನವಿ ಮಾಡಬಹುದೆಂದು ಹೇಳಿದೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗಿರೀಶ್ ಭಾರದ್ವಾಜ್, ನವೀನ್ ಕುಮಾರ್ ನೆರಿಯ ಮತ್ತು ವಿನಾಯಕ ಫ್ರೆಂಡ್ಸ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಧೀಶರು ವಿಚಾರಣೆಗೆ ಸ್ವೀಕರಿಸಿದ್ದರು. ಇವರ ಪರವಾಗಿ ಪುತ್ತೂರಿನ ವಕೀಲ ಅರುಣ್ ಶ್ಯಾಮ್ ವಕಾಲತ್ತು ಮಂಡಿಸಿದ್ದರು.
ಆದರೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮೂರನೇ ವ್ಯಕ್ತಿಯ ಕೋರಿಕೆ ಮೇರೆಗೆ ಒಂದು ಪ್ರಕರಣವನ್ನು ಮರು ತನಿಖೆ ಮಾಡಲು ಅವಕಾಶ ಇರುವುದಿಲ್ಲ. ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶ ಇದೆ. ಅದು ಬಿಟ್ಟರೆ ಸಾರ್ವಜನಿಕರ ಹಕ್ಕೊತ್ತಾಯ, ಜನಾಕ್ರೋಶಕ್ಕೆ ಮಣಿದು ರಾಜ್ಯ ಸರಕಾರವೂ ಈ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ ನ್ಯಾಯಾಧೀಶರು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಹಾಗೆಂದು ಕೋರ್ಟಿನ ತೀರ್ಪಿನ ವಿರುದ್ಧ ಸಭೆ, ಸಮಾರಂಭ, ಧರಣಿ ಅಥವಾ ಜನರ ಭಾವನೆಗಳನ್ನು ಪರಿಗಣಿಸಿ ಕೋರ್ಟ್ ಕಾನೂನು ಚೌಕಟ್ಟನ್ನು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ, ಕಾನೂನು ಮಿತಿಯಲ್ಲಿ ವ್ಯವಹರಿಸಬೇಕಾಗುತ್ತದೆ. ಇದರ ಬದಲು ಸಂತ್ರಸ್ತ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡುವಂತೆ ಇಬ್ಬರು ನ್ಯಾಯಾಧೀಶರಿದ್ದ ವಿಭಾಗೀಯ ಪೀಠ ಸಲಹೆ ಮಾಡಿದೆ.
Sowjanya rape case, No third party allowed for re-investigation, PIL petition dismissed in High Court. The judge did not agree to consider the public interest petition submitted to the High Court for a re-investigation in the Sowjanya murder case.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm