ಬ್ರೇಕಿಂಗ್ ನ್ಯೂಸ್
08-09-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆಯಾಗಬೇಕೆಂದು ಹೈಕೋರ್ಟಿಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಧೀಶರು ಪರಿಗಣಿಸಲು ಒಪ್ಪಿಗೆ ನೀಡಿಲ್ಲ. ಬದಲಿಗೆ, ಮೂಲ ಅರ್ಜಿದಾರರು, ಸಂತ್ರಸ್ತ ಕುಟುಂಬ ಅಥವಾ ಸರಕಾರ ಮಾತ್ರ ಮರು ತನಿಖೆಗೆ ಮನವಿ ಮಾಡಬಹುದೆಂದು ಹೇಳಿದೆ.
ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗಿರೀಶ್ ಭಾರದ್ವಾಜ್, ನವೀನ್ ಕುಮಾರ್ ನೆರಿಯ ಮತ್ತು ವಿನಾಯಕ ಫ್ರೆಂಡ್ಸ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಧೀಶರು ವಿಚಾರಣೆಗೆ ಸ್ವೀಕರಿಸಿದ್ದರು. ಇವರ ಪರವಾಗಿ ಪುತ್ತೂರಿನ ವಕೀಲ ಅರುಣ್ ಶ್ಯಾಮ್ ವಕಾಲತ್ತು ಮಂಡಿಸಿದ್ದರು.
ಆದರೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮೂರನೇ ವ್ಯಕ್ತಿಯ ಕೋರಿಕೆ ಮೇರೆಗೆ ಒಂದು ಪ್ರಕರಣವನ್ನು ಮರು ತನಿಖೆ ಮಾಡಲು ಅವಕಾಶ ಇರುವುದಿಲ್ಲ. ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶ ಇದೆ. ಅದು ಬಿಟ್ಟರೆ ಸಾರ್ವಜನಿಕರ ಹಕ್ಕೊತ್ತಾಯ, ಜನಾಕ್ರೋಶಕ್ಕೆ ಮಣಿದು ರಾಜ್ಯ ಸರಕಾರವೂ ಈ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ ನ್ಯಾಯಾಧೀಶರು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಹಾಗೆಂದು ಕೋರ್ಟಿನ ತೀರ್ಪಿನ ವಿರುದ್ಧ ಸಭೆ, ಸಮಾರಂಭ, ಧರಣಿ ಅಥವಾ ಜನರ ಭಾವನೆಗಳನ್ನು ಪರಿಗಣಿಸಿ ಕೋರ್ಟ್ ಕಾನೂನು ಚೌಕಟ್ಟನ್ನು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ, ಕಾನೂನು ಮಿತಿಯಲ್ಲಿ ವ್ಯವಹರಿಸಬೇಕಾಗುತ್ತದೆ. ಇದರ ಬದಲು ಸಂತ್ರಸ್ತ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡುವಂತೆ ಇಬ್ಬರು ನ್ಯಾಯಾಧೀಶರಿದ್ದ ವಿಭಾಗೀಯ ಪೀಠ ಸಲಹೆ ಮಾಡಿದೆ.
Sowjanya rape case, No third party allowed for re-investigation, PIL petition dismissed in High Court. The judge did not agree to consider the public interest petition submitted to the High Court for a re-investigation in the Sowjanya murder case.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm