Chitradurga Accident: ಚಿತ್ರದುರ್ಗ ; ಲಾರಿ - ಕೆಎಸ್​ಆರ್​ಟಿಸಿ ಬಸ್ ಭೀಕರ ಅಪಘಾತ, ಮಗು ಸೇರಿ ನಾಲ್ವರ ದುರ್ಮರಣ

11-09-23 11:34 am       HK News Desk   ಕರ್ನಾಟಕ

ಕೆಎಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಚಿತ್ರದುರ್ಗ, ಸೆ.11: ಕೆಎಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ.

ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಬಸ್ಸಿನ ಎಡಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿ ಎಡಗಡೆಯ ಸೀಟಿನಲ್ಲಿ ಮುಂದೆ ಕುಳಿತಿರುವ ನಾಲ್ವರು ಮೃತಪಟ್ಟಿದ್ದಾರೆ. ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

In a tragic incident, four persons travelling in a bus were killed and ten others injured in an accident near Gollahalli National Highway 150 in Karnataka's Chitradurga district on Monday.