ಬ್ರೇಕಿಂಗ್ ನ್ಯೂಸ್
11-09-23 05:17 pm HK News Desk ಕರ್ನಾಟಕ
ಮೈಸೂರು, ಸೆ.11: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಸಹ ಬಿಜೆಪಿಗೆ ಹೋಗದು. ನಾನು ಯಾವುದೇ ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡಿದರೇ, ಅದಕ್ಕೆ ಆ ಪಕ್ಷವನ್ನು ಸೇರುತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು.
ಕಾವೇರಿ ನೀರು ಬಿಡುಗಡೆ ವಿಚಾರ: ಪ್ರಾಧಿಕಾರದ ಆದೇಶ ಇರುವ ಕಾರಣ ಅನಿವಾರ್ಯವಾಗಿ ನೀರು ಬಿಡುತ್ತಿದ್ದೇವೆ. ಖುಷಿಯಿಂದ ನೀರು ಬಿಡುತ್ತಿಲ್ಲ. ತಮಿಳುನಾಡು ವಿನಾಃ ಕಾರಣ ಕ್ಯಾತೆ ತೆಗೆಯುತ್ತಿದೆ. 21 ನೇ ತಾರೀಖಿನಂದು ಮತ್ತೆ ಕೋರ್ಟಿನಲ್ಲಿ ನಮ್ಮ ಕಷ್ಟವನ್ನು ವಿವರಿಸುತ್ತೇವೆ. ಬಿಜೆಪಿಯವರು ಇದರಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಲಿ. ಈಗ ಮತ್ತೆ ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಪ್ರಧಾನಿ ಬಳಿ ನಿಯೋಗ ಹೋಗಲು ತಯಾರಿದ್ದೆವು. ಆದರೆ ಪ್ರಧಾನಿ ಭೇಟಿಗೆ ದಿನಾಂಕವೇ ಸಿಗುತ್ತಿಲ್ಲ. ಬಿಜೆಪಿಯವರಿಗೆ ಹೇಳಿದರೆ ಅವರು ಕೇಳುವ ಸ್ಥಿತಿಯಲ್ಲಿಲ್ಲ. ಇಲ್ಲೇ ಕುಳಿತು ಕಥೆ ಹೇಳುತ್ತಿದ್ದಾರೆ. ನಾವು ರೈತರ ರಕ್ಷಣೆಗೆ ಈಗಲೂ ಬದ್ದ ಎಂದು ಸಿಎಂ ತಿಳಿಸಿದರು.
ಮುಂದಿನ ಕ್ಯಾಬಿನೆಟ್ನಲ್ಲಿ ಬರ ಘೋಷಣೆ:
ರಾಜ್ಯದಲ್ಲಿ ಮಳೆ ಇಲ್ಲದೆ ಕೆಲವು ತಾಲ್ಲೂಕುಗಳಲ್ಲಿ ಬರ ಬಂದಿದ್ದು, ಸದ್ಯಕ್ಕೆ 61 ತಾಲ್ಲೂಕುಗಳನ್ನು ಬರದ ತಾಲ್ಲೂಕುಗಳೆಂದು ಪಟ್ಟಿ ಮಾಡಿದ್ದೇವೆ. ಇನ್ನೂ 136 ತಾಲ್ಲೂಕುಗಳಲ್ಲಿ ಬರ ಅಧ್ಯಯನ ನಡೆಯುತ್ತಿದೆ. ಅದರ ವರದಿ ಸೇರಿಸಿ, ಮುಂದಿನ ಕ್ಯಾಬಿನೆಟ್ನಲ್ಲಿ ಬರ ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
'ಒಂದು ದೇಶ, ಒಂದು ಚುನಾವಣೆ ಅಸಾಧ್ಯ':
ಒಂದು ದೇಶ, ಒಂದು ಚುನಾವಣೆ ಈ ಯೋಜನೆಯ ಅವೈಜ್ಞಾನಿಕವಾದುದು. ಒಂದು ಚುನಾವಣೆ ನಡೆಸಲು ಹೇಗೆ ಸಾಧ್ಯ?. ಇದೊಂದು ಅಸಾಧ್ಯದ ಮಾತು. ಕೆಲವು ರಾಜ್ಯಗಳಲ್ಲಿ ರಾಜ್ಯಪಾಲರ ಆಡಳಿತವಿರುತ್ತದೆ. ಕೆಲವು ಕಡೆ ಅರ್ಧ ಸರ್ಕಾರ ನಡೆಯುತ್ತಿರುತ್ತದೆ. ಕರ್ನಾಟಕದ ಚುನಾವಣಾ ಫಲಿತಾಂಶದಿಂದ ಕೇಂದ್ರದ ಬಿಜೆಪಿ ನಾಯಕರು ದೃತಿಗೆಟ್ಟಿದ್ದಾರೆ. ಮೋದಿ ಬಂದು ಪ್ರಚಾರ ಮಾಡಿದ ಕಡೆ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ. ಇದೇ ಒತ್ತಡದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
Even my corpse will not join the BJP, said Chief Minister and Congress leader Siddaramaiah. Speaking to media persons, here, on Monday, he said, his entire political career is against communal forces and thus the statement of former chief minister H D Kumaraswamy is funny.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm