ಬ್ರೇಕಿಂಗ್ ನ್ಯೂಸ್
11-09-23 05:17 pm HK News Desk ಕರ್ನಾಟಕ
ಮೈಸೂರು, ಸೆ.11: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಸಹ ಬಿಜೆಪಿಗೆ ಹೋಗದು. ನಾನು ಯಾವುದೇ ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡಿದರೇ, ಅದಕ್ಕೆ ಆ ಪಕ್ಷವನ್ನು ಸೇರುತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು.
ಕಾವೇರಿ ನೀರು ಬಿಡುಗಡೆ ವಿಚಾರ: ಪ್ರಾಧಿಕಾರದ ಆದೇಶ ಇರುವ ಕಾರಣ ಅನಿವಾರ್ಯವಾಗಿ ನೀರು ಬಿಡುತ್ತಿದ್ದೇವೆ. ಖುಷಿಯಿಂದ ನೀರು ಬಿಡುತ್ತಿಲ್ಲ. ತಮಿಳುನಾಡು ವಿನಾಃ ಕಾರಣ ಕ್ಯಾತೆ ತೆಗೆಯುತ್ತಿದೆ. 21 ನೇ ತಾರೀಖಿನಂದು ಮತ್ತೆ ಕೋರ್ಟಿನಲ್ಲಿ ನಮ್ಮ ಕಷ್ಟವನ್ನು ವಿವರಿಸುತ್ತೇವೆ. ಬಿಜೆಪಿಯವರು ಇದರಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಲಿ. ಈಗ ಮತ್ತೆ ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಪ್ರಧಾನಿ ಬಳಿ ನಿಯೋಗ ಹೋಗಲು ತಯಾರಿದ್ದೆವು. ಆದರೆ ಪ್ರಧಾನಿ ಭೇಟಿಗೆ ದಿನಾಂಕವೇ ಸಿಗುತ್ತಿಲ್ಲ. ಬಿಜೆಪಿಯವರಿಗೆ ಹೇಳಿದರೆ ಅವರು ಕೇಳುವ ಸ್ಥಿತಿಯಲ್ಲಿಲ್ಲ. ಇಲ್ಲೇ ಕುಳಿತು ಕಥೆ ಹೇಳುತ್ತಿದ್ದಾರೆ. ನಾವು ರೈತರ ರಕ್ಷಣೆಗೆ ಈಗಲೂ ಬದ್ದ ಎಂದು ಸಿಎಂ ತಿಳಿಸಿದರು.
ಮುಂದಿನ ಕ್ಯಾಬಿನೆಟ್ನಲ್ಲಿ ಬರ ಘೋಷಣೆ:
ರಾಜ್ಯದಲ್ಲಿ ಮಳೆ ಇಲ್ಲದೆ ಕೆಲವು ತಾಲ್ಲೂಕುಗಳಲ್ಲಿ ಬರ ಬಂದಿದ್ದು, ಸದ್ಯಕ್ಕೆ 61 ತಾಲ್ಲೂಕುಗಳನ್ನು ಬರದ ತಾಲ್ಲೂಕುಗಳೆಂದು ಪಟ್ಟಿ ಮಾಡಿದ್ದೇವೆ. ಇನ್ನೂ 136 ತಾಲ್ಲೂಕುಗಳಲ್ಲಿ ಬರ ಅಧ್ಯಯನ ನಡೆಯುತ್ತಿದೆ. ಅದರ ವರದಿ ಸೇರಿಸಿ, ಮುಂದಿನ ಕ್ಯಾಬಿನೆಟ್ನಲ್ಲಿ ಬರ ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
'ಒಂದು ದೇಶ, ಒಂದು ಚುನಾವಣೆ ಅಸಾಧ್ಯ':
ಒಂದು ದೇಶ, ಒಂದು ಚುನಾವಣೆ ಈ ಯೋಜನೆಯ ಅವೈಜ್ಞಾನಿಕವಾದುದು. ಒಂದು ಚುನಾವಣೆ ನಡೆಸಲು ಹೇಗೆ ಸಾಧ್ಯ?. ಇದೊಂದು ಅಸಾಧ್ಯದ ಮಾತು. ಕೆಲವು ರಾಜ್ಯಗಳಲ್ಲಿ ರಾಜ್ಯಪಾಲರ ಆಡಳಿತವಿರುತ್ತದೆ. ಕೆಲವು ಕಡೆ ಅರ್ಧ ಸರ್ಕಾರ ನಡೆಯುತ್ತಿರುತ್ತದೆ. ಕರ್ನಾಟಕದ ಚುನಾವಣಾ ಫಲಿತಾಂಶದಿಂದ ಕೇಂದ್ರದ ಬಿಜೆಪಿ ನಾಯಕರು ದೃತಿಗೆಟ್ಟಿದ್ದಾರೆ. ಮೋದಿ ಬಂದು ಪ್ರಚಾರ ಮಾಡಿದ ಕಡೆ ಕಾಂಗ್ರೆಸ್ 135 ಸ್ಥಾನ ಗೆದ್ದಿದೆ. ಇದೇ ಒತ್ತಡದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
Even my corpse will not join the BJP, said Chief Minister and Congress leader Siddaramaiah. Speaking to media persons, here, on Monday, he said, his entire political career is against communal forces and thus the statement of former chief minister H D Kumaraswamy is funny.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm