ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm