ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm