ಬ್ರೇಕಿಂಗ್ ನ್ಯೂಸ್
13-09-23 04:45 pm HK News Desk ಕರ್ನಾಟಕ
ಶಿವಮೊಗ್ಗ, ಸೆ.13: ಚೈತ್ರಾ ಕುಂದಾಪುರ ವಂಚನೆ ಮಾಡಿದ್ರೆ ಕಾನೂನು ಕ್ರಮ ಆಗಲಿ. ಆದರೆ, ಅನವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಸಹಿಸಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಚೈತ್ರಾ ಕುಂದಾಪುರ ಬಂಧನದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತಪ್ಪಿದ್ದರೆ ಕ್ರಮ ಕೈಗೊಳ್ಳಲಿ. ಆದರೆ, ಅನಗತ್ಯವಾಗಿ ಹಿಂದೂ ಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ. ಅವರನ್ನು ಆಧಾರ ರಹಿತವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರಾ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.
ಸಚಿವ ಡಿ ಸುಧಾಕರ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸುಧಾಕರ್ಗೆ ಒಂದು ಕಾನೂನು, ಬೇರೆಯವರಿಗೊಂದು ಕಾನೂನು ಇಲ್ಲ. ಕಾನೂನಿಗೆ ವಿರುದ್ಧವಾಗಿದ್ದರೆ ಸುಧಾಕರ್ ಮೇಲೆ ಕ್ರಮ ಆಗಲಿ, ವಿಚಾರಣೆ ಆಗಲಿ, ಸತ್ಯಾಸತ್ಯತೆ ಹೊರಬರಲಿ. ಸುಧಾಕರ್ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿರುವುದು ಗೊತ್ತಿಲ್ಲ. ದಲಿತರಿಗೆ ದೌರ್ಜನ್ಯ, ಅನ್ಯಾಯ ಆಗಬಾರದು ಎಂದು ಹೇಳಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಮಲೆನಾಡಿನಲ್ಲಿ ಇಷ್ಟು ಮಳೆ ಕಡಿಮೆಯಾಗಿರುವುದು ನನ್ನ ಜೀವನದಲ್ಲಿ ನಾನು ನೋಡಿರಲಿಲ್ಲ. ಜಮೀನಿನಲ್ಲಿ ಅರ್ಧಂಬರ್ಧ ನಾಟಿಯಾಗಿದೆ. ಇನ್ನೆರಡು ತಿಂಗಳಲ್ಲಿ ನೀರಿನ ಅಭಾವ ಸಹ ತಲೆದೋರಲಿದೆ. ತೀರ್ಥಹಳ್ಳಿ, ಹೊಸನಗರ ಸೇರಿ ಉಳಿದ ತಾಲೂಕುಗಳಲ್ಲೂ ಮಳೆ ಕೊರತೆಯಾಗಿದೆ. ತಕ್ಷಣವೇ ಬರ ಘೋಷಣೆ ಮಾಡಬೇಕು. ಇದಕ್ಕೆ ಮೀನಾಮೇಷ ಎಣಿಸಬಾರದು ಎಂದು ಆಗ್ರಹಿಸಿದರು.
ಅತಿವೃಷ್ಟಿಯಾದಾಗ ರಾಜ್ಯ ಸರ್ಕಾರದಿಂದ ಪರಿಹಾರ ಕೊಟ್ಟು ಸಾಂತ್ವನ ಹೇಳಿದ್ದೇವು. ಅದೇ ರೀತಿ ಬರಗಾಲದ ಈ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಧಾವಿಸಬೇಕು. ರೈತರಿಗೆ ಬೀಜದ ಭತ್ತ, ಗೊಬ್ಬರ ನೀಡಬೇಕು. ಈಗ ಹಾಕಿರುವ ಎಲ್ಲವೂ ನಾಶವಾಗಿದೆ, ಭೂಮಿ ಬಾಯಿ ಬಿಟ್ಟಿದೆ. ಆದರೆ ಸರ್ಕಾರ ಈ ಬಗ್ಗೆ ಗಮನ ಹರಿಸಿದಂತೆ ಕಾಣುವುದಿಲ್ಲ. ಅಧಿಕಾರಕ್ಕೆ ಬಂದ ನಾಲ್ಕು ತಿಂಗಳಾದರೂ ಆಡಳಿತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ರೈತರು ಬೇರೆ ದಾರಿ ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭತ್ತಕ್ಕೆ ಬೆಲೆ ಇದ್ದರೂ ಬೆಳೆಯಲಾಗುತ್ತಿಲ್ಲ. ಬೋರ್ವೆಲ್ನಿಂದ ನೀರು ಹರಿಸಲೂ ವಿದ್ಯುತ್ ಇಲ್ಲ ಎಂದರು.
Hindutva activist Chaitra Kundapura arrested, former Home Minister Araga Jnanendra slams arrest of Chaitra. Bengaluru Central Crime Branch police arrested right-wing activist Chaitra Kundapura from Udupi on September 12, on the charge of cheating a businessperson after promising to get him the BJP ticket for Byndoor Assembly constituency.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm