ಬ್ರೇಕಿಂಗ್ ನ್ಯೂಸ್
14-09-23 11:24 am HK News Desk ಕರ್ನಾಟಕ
ಮಂಜೇಶ್ವರ, ಸೆ.14: ಒಂದೂವರೆ ತಿಂಗಳ ಮಗುವನ್ನು ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ಮಂಗಲ್ಪಾಡಿ ಬಳಿಯ ಕೋಟಿಬೈಲು ಎಂಬಲ್ಲಿ ನಡೆದಿದ್ದು ತಾಯಿಯೇ ಕೊಲೆಗೈದ ಆರೋಪ ಕೇಳಿಬಂದಿದೆ.
ಸತ್ಯನಾರಾಯಣ- ಸುಮಂಗಲಾ ದಂಪತಿಯ ಒಂದೂವರೆ ತಿಂಗಳ ಮಗು ಕೆಸರಿನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು ಮಗುವಿನ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿರುವುದರಿಂದ ಕತ್ತು ಹಿಸುಕಿ ಕೊಲೆಗೈದು ಕೆಸರಿನಲ್ಲಿ ಮುಳುಗಿಸಿರುವ ಶಂಕೆಯಿದೆ. ಕೃತ್ಯದ ಬಳಿಕ ಸುಮಂಗಲಾ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಅಸ್ಪಷ್ಟ ಹೇಳಿಕೆ ನೀಡುತ್ತಿದ್ದು ಪೊಲೀಸರು ಆಕೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸುಮಂಗಲಾ - ಸತ್ಯನಾರಾಯಣ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಸುಮಂಗಲಾ ಉಪ್ಪಳ ಬಳಿಯ ಅತ್ತೆಯ ಮನೆಯಲ್ಲಿ ವಾಸವಿದ್ದಳು. ಪತಿಯ ಜೊತೆಗೆ ವೈಮನಸ್ಯದಿಂದ ಮಾನಸಿಕ ತೊಂದರೆಗೀಡಾಗಿದ್ದಳು. ಇತ್ತೀಚಿಗೆ ತಾಯಿಯೂ ತೀರಿಕೊಂಡಿದ್ದರಿಂದ ಮಾನಸಿಕ ಖಿನ್ನಳಾಗಿದ್ದಳು. ಮಗುವನ್ನು ಗದ್ದೆಯ ಬಳಿಗೆ ಕೊಂಡೊಯ್ಯುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಜೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುಮಂಗಲಾ ತಲಪಾಡಿ ಬಳಿಯ ಕಿನ್ಯಾ ನಿವಾಸಿಯಾಗಿದ್ದು ಗರ್ಭಿಣಿಯಾದಾಗಲೇ ಗಂಡನ ಬಗ್ಗೆ ವೈಮನಸ್ಯ ಹೊಂದಿದ್ದು ತಾಯಿ ಮನೆಯಲ್ಲಿದ್ದಳು. ಈಚೆಗೆ ತಾಯಿ ತೀರಿಕೊಂಡಿದ್ದರಿಂದ ಉಪ್ಪಳದ ಅತ್ತೆ ಮನೆಗೆ ಹೋಗಿ ಉಳಿದುಕೊಂಡಿದ್ದಳು.
In a shocking incident a mother allegedly killed her newborn baby by drowing it in the muddy water at Kasargod.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm