ಬ್ರೇಕಿಂಗ್ ನ್ಯೂಸ್
14-09-23 02:38 pm HK News Desk ಕರ್ನಾಟಕ
ಬೆಂಗಳೂರು, ಸೆ.14: ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ.
ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ;
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರರನ್ನು ಪೊಲೀಸ್ ಜೀಪಿನಲ್ಲಿ ಇಂದು ಸಿಸಿಬಿ ಪೊಲೀಸರು ಕರೆತಂದಾಗ ಜೀಪಿನಿಂದ ಇಳಿಯುತ್ತಲೇ ಮಾಧ್ಯಮ ಪ್ರತಿನಿಧಿಗಳನ್ನು ಕಂಡಾಗ, ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿರುವ ಮಾಹಿತಿಯಿದೆ.
On Thursday, arrested Hindu activist Chaitra Kundapura claimed that big personalities were involved in the BJP ticket scam in Karnataka. She made the remarks to media persons while being taken for interrogation at the City Central Crime Branch (CCB) building here.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm