ಬ್ರೇಕಿಂಗ್ ನ್ಯೂಸ್
14-09-23 02:38 pm HK News Desk ಕರ್ನಾಟಕ
ಬೆಂಗಳೂರು, ಸೆ.14: ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ.
ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ;
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರರನ್ನು ಪೊಲೀಸ್ ಜೀಪಿನಲ್ಲಿ ಇಂದು ಸಿಸಿಬಿ ಪೊಲೀಸರು ಕರೆತಂದಾಗ ಜೀಪಿನಿಂದ ಇಳಿಯುತ್ತಲೇ ಮಾಧ್ಯಮ ಪ್ರತಿನಿಧಿಗಳನ್ನು ಕಂಡಾಗ, ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿರುವ ಮಾಹಿತಿಯಿದೆ.
On Thursday, arrested Hindu activist Chaitra Kundapura claimed that big personalities were involved in the BJP ticket scam in Karnataka. She made the remarks to media persons while being taken for interrogation at the City Central Crime Branch (CCB) building here.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm