ಬ್ರೇಕಿಂಗ್ ನ್ಯೂಸ್
15-09-23 03:08 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸುಳ್ಳು ಸುದ್ದಿಗಳ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಸಮಿತಿಯನ್ನು ಆರಂಭಿಸಲಾಗುವುದು. ಹಾಗೆಂದು ನಾವು ಮಾಧ್ಯಮಗಳನ್ನು ನಿಯಂತ್ರಣದಲ್ಲಿಡಲು ಹೊರಟಿಲ್ಲ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಸುಳ್ಳು ಸುದ್ದಿ ಪ್ರಸಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಇದಕ್ಕಾಗಿ ಈ ರೀತಿಯ ವ್ಯವಸ್ಥೆಯನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಅದಕ್ಕಾಗಿ ಪ್ರತ್ಯೇಕ ಫ್ಯಾಕ್ಟ್ ಚೆಕ್ ಸಮಿತಿ ಎನ್ನುವ ತಂಡ ರಚನೆ ಮಾಡಲಿದ್ದೇವೆ. ಹಾಗೆಂದು ಯಾವುದೇ ರಾಜಕೀಯ ದ್ವೇಷ ಮಾಡೋದಿಲ್ಲ. ಮಾಧ್ಯಮಗಳನ್ನು ನಿಯಂತ್ರಣ ಮಾಡಲು ಹೊರಟಿಲ್ಲ ಎಂದು ಸಚಿವರು ಹೇಳಿದರು.
ಫ್ಯಾಕ್ಟ್ ಚೆಕಿಂಗ್ ತಂಡ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆ ನಡೆಸಲಿದೆ. ಸುಳ್ಳು ಸುದ್ದಿಯ ಮೂಲ ಪತ್ತೆಗೆ ಕೆಲಸ ಮಾಡಲಿದೆ. ವಿಶ್ಲೇಷಣಾ ತಂಡ ಸುಳ್ಳು ಮಾಹಿತಿಯ ಸೃಷ್ಟಿಯ ಬಗ್ಗೆ ಹಾಗೂ ಇದರ ಪರಿಣಾಮದ ಬಗ್ಗೆ ನಿಗಾ ಇಡಲಿದೆ. ಸುಳ್ಳು ಸುದ್ದಿಯ ಬಗ್ಗೆ ಪೂರ್ವ ಮಾಹಿತಿಯನ್ನು ನೀಡಲಿದೆ.
ಸಾಮರ್ಥ್ಯ ಬಲವರ್ಧನೆ ತಂಡ, ಸುಳ್ಳು ಸುದ್ದಿಯ ಬಗ್ಗೆ ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಲಿದೆ. ಈ ಎಲ್ಲಾ ತಂಡಗಳ ಕಾರ್ಯ ನಿರ್ವಹಣೆಯನ್ನು ಮೇಲುಸ್ತುವಾರಿ ಸಮಿತಿ ವಹಿಸಲಿದೆ.
ಸಾರ್ವಜನಿಕರು ಸುಳ್ಳು ಸುದ್ದಿಯ ಬಗ್ಗೆ ನೇರವಾಗಿ ಈ ಕಮಿಟಿಗೆ ದೂರು ನೀಡಬಹುದು. ಫ್ಯಾಕ್ಟ್ ಚೆಕ್ ಏಜೆನ್ಸಿಗಳು ಸುಳ್ಳು ಸುದ್ದಿಯ ಬಗ್ಗೆ ಪರಿಶೀಲನೆ ನಡೆಸಲಿದೆ. ದೂರು ಸಲ್ಲಿಕೆಯಾದ ಕೂಡಲೇ ಫ್ಯಾಕ್ಟ್ ಚೆಕ್ ಸಮಿತಿ ಪ್ರಾಥಮಿಕ ಪರಿಶೀಲನೆ ನಡೆಸಲಿದೆ. ಈ ಮಾಹಿತಿಯ ಸಾರ್ವಜನಿಕ ವಲಯದಲ್ಲಿ ಲಭ್ಯವಿದೆಯೇ ಎಂದು ಪರಿಶೀಲನೆ ನಡೆಸಲಿದೆ. ಮೊದಲ ಹಂತದ ವಿಶ್ಲೇಷಣೆ ಬಳಿಕ ಅಂತಿಮ ವರದಿಯನ್ನು ರಾಜ್ಯ ಸರ್ಕಾರದ ಅಧೀನದಲ್ಲಿರುವ ಮೇಲುಸ್ತುವಾರಿ ಸಮಿತಿ ವಿಶ್ಲೇಷಣೆ ಮಾಡಲಿದೆ. ಸುಳ್ಳು ಸುದ್ದಿಯ ವಿರುದ್ಧ ಕಾನೂನು ಕ್ರಮದ ಅಗತ್ಯವಿದ್ದರೆ ಪೊಲೀಸ್ ದೂರು ದಾಖಲಿಸಲಿದೆ. ಐಟಿ ಬಿಟಿ ಇಲಾಖೆಯ ಮುಖ್ಯಸ್ಥರು, ಎಡಿಜಿಪಿ ( ಗುಪ್ತಚರ), ಆಡಳಿತ ಹಾಗೂ ಸಿಬ್ಬಂದಿ ಸುಧಾರಣೆ ಅಧಿಕಾರಿ, ಕರ್ನಾಟಕ ನಾವಿನ್ಯ ಹಾಗೂ ತಂತ್ರಜ್ಞಾನ ಸೊಸೈಟಿ ( ಕೆಐಡಿಎಸ್) ಎಂಡಿ, ಐಐಎಸ್ ಸಿ ಡೀನ್, ಹೆಚ್ಚುವರಿ ಅಡ್ವಕೇಟ್ ಜನರಲ್ ಹಾಗೂ ಸಿವಿಕ್ ಸೊಸೈಟಿ ಪ್ರತಿನಿಧಿಗಳು ಈ ತಂಡದಲ್ಲಿ ಇರಲಿದ್ದಾರೆ.
The state government on Thursday announced the framework for a fact-checking unit, which is proposed to be set up to tackle fake news and misinformation. In cases of misinformation, disinformation and misinformation (MDM), the government will initiate legal action under the provisions of the Information Technology Act, IPC, or Disaster Management Act, 2005.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm