ಬ್ರೇಕಿಂಗ್ ನ್ಯೂಸ್
15-09-23 05:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಇ-ಎಫ್ಐಅರ್ ದಾಖಲಿಸುವುದು ಹೇಗೆ?:
ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ.
ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ, ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ನಂತರ ನಿಮ್ಮ ಮೊಬೈಲ್ ನಂಬರ್ಗೆ ಮೆಸೇಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.
ಐಪಿಎಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಪಿಎಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ ಹಾಗೂ ಸೈಬರ್ ಕ್ರೈಂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ತಡೆಯಲು ರಚಿಸಲಾಗಿದ್ದ ಫ್ಯಾಕ್ಟ್ ಚೆಕ್ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
Police department E FIR first time in Karnataka inaugurated by CM Siddaramaiah.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm