ಬ್ರೇಕಿಂಗ್ ನ್ಯೂಸ್
15-09-23 05:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಇ-ಎಫ್ಐಅರ್ ದಾಖಲಿಸುವುದು ಹೇಗೆ?:
ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ.
ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ, ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ನಂತರ ನಿಮ್ಮ ಮೊಬೈಲ್ ನಂಬರ್ಗೆ ಮೆಸೇಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.
ಐಪಿಎಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಪಿಎಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ ಹಾಗೂ ಸೈಬರ್ ಕ್ರೈಂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ತಡೆಯಲು ರಚಿಸಲಾಗಿದ್ದ ಫ್ಯಾಕ್ಟ್ ಚೆಕ್ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
Police department E FIR first time in Karnataka inaugurated by CM Siddaramaiah.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm