ಬ್ರೇಕಿಂಗ್ ನ್ಯೂಸ್
15-09-23 08:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಿಜೆಪಿ ಟಿಕೆಟ್ ಕೊಡಿಸುತ್ತೇವೆಂದು ಮತ್ತೊಂದು ವಂಚನೆ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೇ ಕೊಪ್ಪಳ ಜಿಲ್ಲೆಯ ಬಿಜೆಪಿ ಮುಖಂಡನಿಂದ 21 ಲಕ್ಷ ಪಡೆದು ಟೋಪಿ ಹಾಕಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಬಿಜೆಪಿ ಮುಖಂಡ ಜಿ.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಅವರನ್ನು ನಂಬಿಸಿ ಹಣ ಪಡೆದಿದ್ದಾರೆ. ತಿಮ್ಮಾರೆಡ್ಡಿ ಅವರು ತಮ್ಮ ಪತ್ನಿ ಗಾಯತ್ರಿಗೆ ಟಿಕೆಟ್ ಕೊಡಿಸುವಲ್ಲಿ ಭಾರಿ ಪ್ರಯತ್ನ ಮಾಡಿದ್ದರು. ಬಿಜೆಪಿ ಟಿಕೆಟಿಗಾಗಿ ಭಾರೀ ಪೈಪೋಟಿ ನಡೆಸಿದ್ದ ತಿಮ್ಮಾರೆಡ್ಡಿಯನ್ನು ಚೈತ್ರಾ ಕುಂದಾಪುರ ತಂಡದ ಮಾದರಿಯಲ್ಲೇ ಮೂವರ ತಂಡ ಸಂಪರ್ಕಿಸಿ ಮೋಸ ಮಾಡಿದೆ.

ಅಮಿತ್ ಷಾ ಹೆಸರಲ್ಲಿ ವಂಚನೆ
ತಾವು ಗೃಹ ಸಚಿವ ಅಮಿತ್ ಷಾ ಆಪ್ತರೆಂದು ಹೇಳಿಕೊಂಡು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬವರು ತಿಮ್ಮಾರೆಡ್ಡಿಯನ್ನು ಸಂಪರ್ಕಿಸಿದ್ದರು. 19 ಲಕ್ಷ ನಗದು ಮತ್ತು ಎರಡು ಲಕ್ಷ ರೂ. ಖಾತೆಗೆ ಹಾಕಿಸಿಕೊಂಡಿದ್ದರು. ಚೈತ್ರಾಳ ಡೀಲ್ ಪುರಾಣ ಹೊರಬರುತ್ತಲೇ ತಿಮ್ಮಾರೆಡ್ಡಿ ಅವರು ಮೂವರು ವಂಚಕರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



ಅಮಿತ್ ಷಾ ಸೂಚನೆಯಂತೆ, ರಾಜ್ಯದಲ್ಲಿ ಸಮೀಕ್ಷೆ ಮಾಡ್ತಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೇವೆ ಎಂದು ಹೇಳಿಕೊಂಡಿದ್ದ ತಂಡದ ವಿಶಾಲ್ ನಾಗ್ ಎಂಬಾತ ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ತಂಡದಲ್ಲಿ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ. ಹೀಗಾಗಿ ಆತನನ್ನ ನಂಬಿ ವಿಶಾಲ್ ನಾಗ್ ಅವರ ಬ್ಯಾಂಕ್ ಖಾತೆಗ 2 ಲಕ್ಷ ರೂ., 19 ಲಕ್ಷ ನಗದನ್ನು ನೇರವಾಗಿ ನೀಡಿದ್ದೆ. ಇವರು, ನನ್ನ ರೀತಿ ಬಹಳ ಜನರಿಗೆ ಮೋಸ ಮಾಡಿದ್ದಾರೆ ಎಂದು ತಿಮ್ಮಾರೆಡ್ಡಿ ತಿಳಿಸಿದ್ದಾರೆ.
ಹೀಗಾಗಿ ಬಿಜೆಪಿ ಟಿಕೆಟ್ ಗಾಗಿ ರಾಜ್ಯದಲ್ಲಿ ಹಲವಾರು ಮಂದಿ ಆಕಾಂಕ್ಷಿಗಳು ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಚೈತ್ರಾ ಕುಂದಾಪುರ ಮತ್ತು ತಂಡ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಐದು ಕೋಟಿ ಡೀಲ್ ಮಾಡಿರೋದು ಬೆಳಕಿಗೆ ಬರುತ್ತಲೇ ಮತ್ತೊಂದು ವಂಚನೆ ಪುರಾಣ ಹೊರಬಂದಿದೆ.
Another fraud case exposed like Chaitra Kundapura in Bangalore by the name of Amith Shah, Thimareddy duped of 19 lakhs in the name of BJP Ticket.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm