ಬ್ರೇಕಿಂಗ್ ನ್ಯೂಸ್
16-09-23 06:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ಈ ಬಾರಿಯೂ ಗಣೇಶನ ಹಬ್ಬದ ಹೆಸರಲ್ಲಿ ಪ್ರಯಾಣಿಕರನ್ನು ದೋಚಲು ಖಾಸಗಿ ಬಸ್ಗಳ ಜೊತೆಗೆ ಕೆಎಸ್ಸಾರ್ಟಿಸಿಯೂ ಮುಂದಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಕೂಡ ತನ್ನ ವಿಶೇಷ ಬಸ್ಗಳ ಪ್ರಯಾಣ ದರವನ್ನು ಶೇ.20 ರಷ್ಟು ಹೆಚ್ಚಿಸಿದ್ದು ಅಧಿಕೃತವಾಗಿ ಹೇಳಿಕೊಂಡಿದೆ!
ಗಣೇಶ ಹಬ್ಬದ ಸಂದರ್ಭದಲ್ಲಿ ಒಂದೆಡೆ ಖಾಸಗಿ ಬಸ್ಗಳು ಟಿಕೆಟ್ ದರ ಹೆಚ್ಚಿಸಿ ಸುಲಿಗೆ ಮಾಡುತ್ತಿದ್ದರೆ, ಸಾರಿಗೆ ಇಲಾಖೆ ಕೇವಲ ಎಚ್ಚರಿಕೆ ನೀಡುವುದಕ್ಕೆ ಸೀಮಿತವಾಗಿದೆ. ಇನ್ನೊಂದೆಡೆ ರಾಜ್ಯದ ಜೀವನಾಡಿಗಳು ಎಂದು ಕರೆಯುವ ಕೆಎಸ್ಆರ್ಟಿಸಿ ಕೂಡ ತನ್ನ ವಿಶೇಷ ಬಸ್ಗಳ ಟಿಕೆಟ್ ದರವನ್ನು ಶೇ. 20 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಪ್ರಯಾಣಿಕರು ಖಾಸಗಿ ಆಗಲಿ ಕೆಎಸ್ಆರ್ಟಿಸಿ ಆಗಲಿ ಹೆಚ್ಚಿನ ದರ ಪಾವತಿಸಿಯೇ ತಮ್ಮ ಊರುಗಳಿಗೆ ತೆರಳಬೇಕಾಗಿದೆ.
ಕೆಎಸ್ಆರ್ಟಿಸಿ ವಿಭಾಗದ ಅಧಿಕೃತ ವೆಬ್ಸೈಟ್ನಲ್ಲೇ ವಿಶೇಷ ಬಸ್ಗಳ ಟಿಕೆಟ್ ದರವನ್ನು ಶೇ. 18 ರಿಂದ 20 ರಷ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನಿಂದ ದಾವಣಗೆರೆಗೆ ರಾಜಹಂಸ ಸಾಮಾನ್ಯ ಬಸ್ ದರ 505 ರೂಪಾಯಿ ಇದ್ದರೆ, ರಾಜಹಂಸ ವಿಶೇಷ ಬಸ್ ಟಿಕೆಟ್ ದರ 591 ರೂಪಾಯಿ ಇದೆ. ಬೆಂಗಳೂರು ಹುಬ್ಬಳ್ಳಿ ಎಸಿ ಸ್ಲೀಪರ್ ದರವು 1159 ರೂಪಾಯಿ ಇದೆ. ಇದೇ ಮಾರ್ಗದ ಹಬ್ಬದ ವಿಶೇಷ ಬಸ್ ದರವು 1365 ರೂ. ಇದೆ. ನಾನ್ ಎಸಿ ಸ್ಲೀಪರ್ 975 ರೂಪಾಯಿ ಇದ್ದರೆ, ಹಬ್ಬದ ವಿಶೇಷ ಬಸ್ ದರ 1148 ರೂ. ಇದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು, ಹಬ್ಬದ ಸಂದರ್ಭದಲ್ಲಿ ವಿಶೇಷ ಬಸ್ಗಳ ದರವನ್ನು ಹೆಚ್ಚಳ ಮಾಡುತ್ತೇವೆ. ಈ ಹಿಂದೆಯು ಹಬ್ಬದ ವೇಳೆ ದರ ಹೆಚ್ಚಿಸಿದ್ದೆವು. ಸಾಮಾನ್ಯ ಬಸ್ಗಳ ದರ ಎಂದಿನಂತೆಯೇ ಇದೆ ಎಂದು ಹೇಳುತ್ತಾರೆ. ಇದಲ್ಲದೆ, ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 1200 ಬಸ್ಗಳನ್ನು ಕೆಎಸ್ಆರ್ಟಿಸಿ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಓಡಿಸುತ್ತಿದೆ. ಸೆ. 15ರಿಂದ ಸೆ.17ರ ವರೆಗೆ 1200 ಹೆಚ್ಚುವರಿ ಬಸ್ಗಳು ರಾಜ್ಯ ಮತ್ತು ಹೊರರಾಜ್ಯಗಳಿಗೆ ಓಡಾಡಲಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ಸಿಗಲಿದೆ. ಹೋಗಿ ಬರುವ ಪ್ರಯಾಣದ ಟಿಕೆಟ್ ಕಾಯ್ದಿರಿಸಿದರೆ, ಹಿಂದಿರುಗುವ ಪ್ರಯಾಣ ದರದಲ್ಲಿ ಶೇ. 10 ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ, ಸುದ್ದಿಗೋಷ್ಟಿ ನಡೆಸಿದ್ದ ಶಿವಮೊಗ್ಗ ವಿಭಾಗದ ಕೆಎಸ್ಸಾರ್ಟಿಸಿ ಅಧಿಕಾರಿ, ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳ ದರ ಹೆಚ್ಚಿಸಿದರೆ ದೂರು ಕೊಡುವಂತೆ ಹೇಳಿದ್ದರು. ದರ ಹೆಚ್ಚಿಸುವ ಬಸ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಈಗ ಖಾಸಗಿಯ ಜೊತೆಗೆ ಕೆಎಸ್ಸಾರ್ಟಿಸಿಯೂ ದರ ಹೆಚ್ಚಿಸಿದೆ.
Ahead of the Ganesh Chaturthi celebrations on Monday, thousands of people from across Bengaluru are heading to their respective hometowns this weekend. And as it happens every year, private bus services have significantly hiked the ticket fares to make quick gains on the limited time rush. The fares have been hiked despite a warning from the Transport Commissioner that any spike in ticket prices will invite strict action.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm