ಬ್ರೇಕಿಂಗ್ ನ್ಯೂಸ್
16-09-23 06:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ಈ ಬಾರಿಯೂ ಗಣೇಶನ ಹಬ್ಬದ ಹೆಸರಲ್ಲಿ ಪ್ರಯಾಣಿಕರನ್ನು ದೋಚಲು ಖಾಸಗಿ ಬಸ್ಗಳ ಜೊತೆಗೆ ಕೆಎಸ್ಸಾರ್ಟಿಸಿಯೂ ಮುಂದಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಕೂಡ ತನ್ನ ವಿಶೇಷ ಬಸ್ಗಳ ಪ್ರಯಾಣ ದರವನ್ನು ಶೇ.20 ರಷ್ಟು ಹೆಚ್ಚಿಸಿದ್ದು ಅಧಿಕೃತವಾಗಿ ಹೇಳಿಕೊಂಡಿದೆ!
ಗಣೇಶ ಹಬ್ಬದ ಸಂದರ್ಭದಲ್ಲಿ ಒಂದೆಡೆ ಖಾಸಗಿ ಬಸ್ಗಳು ಟಿಕೆಟ್ ದರ ಹೆಚ್ಚಿಸಿ ಸುಲಿಗೆ ಮಾಡುತ್ತಿದ್ದರೆ, ಸಾರಿಗೆ ಇಲಾಖೆ ಕೇವಲ ಎಚ್ಚರಿಕೆ ನೀಡುವುದಕ್ಕೆ ಸೀಮಿತವಾಗಿದೆ. ಇನ್ನೊಂದೆಡೆ ರಾಜ್ಯದ ಜೀವನಾಡಿಗಳು ಎಂದು ಕರೆಯುವ ಕೆಎಸ್ಆರ್ಟಿಸಿ ಕೂಡ ತನ್ನ ವಿಶೇಷ ಬಸ್ಗಳ ಟಿಕೆಟ್ ದರವನ್ನು ಶೇ. 20 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಪ್ರಯಾಣಿಕರು ಖಾಸಗಿ ಆಗಲಿ ಕೆಎಸ್ಆರ್ಟಿಸಿ ಆಗಲಿ ಹೆಚ್ಚಿನ ದರ ಪಾವತಿಸಿಯೇ ತಮ್ಮ ಊರುಗಳಿಗೆ ತೆರಳಬೇಕಾಗಿದೆ.
ಕೆಎಸ್ಆರ್ಟಿಸಿ ವಿಭಾಗದ ಅಧಿಕೃತ ವೆಬ್ಸೈಟ್ನಲ್ಲೇ ವಿಶೇಷ ಬಸ್ಗಳ ಟಿಕೆಟ್ ದರವನ್ನು ಶೇ. 18 ರಿಂದ 20 ರಷ್ಟು ಹೆಚ್ಚಿಸಲಾಗಿದೆ. ಬೆಂಗಳೂರಿನಿಂದ ದಾವಣಗೆರೆಗೆ ರಾಜಹಂಸ ಸಾಮಾನ್ಯ ಬಸ್ ದರ 505 ರೂಪಾಯಿ ಇದ್ದರೆ, ರಾಜಹಂಸ ವಿಶೇಷ ಬಸ್ ಟಿಕೆಟ್ ದರ 591 ರೂಪಾಯಿ ಇದೆ. ಬೆಂಗಳೂರು ಹುಬ್ಬಳ್ಳಿ ಎಸಿ ಸ್ಲೀಪರ್ ದರವು 1159 ರೂಪಾಯಿ ಇದೆ. ಇದೇ ಮಾರ್ಗದ ಹಬ್ಬದ ವಿಶೇಷ ಬಸ್ ದರವು 1365 ರೂ. ಇದೆ. ನಾನ್ ಎಸಿ ಸ್ಲೀಪರ್ 975 ರೂಪಾಯಿ ಇದ್ದರೆ, ಹಬ್ಬದ ವಿಶೇಷ ಬಸ್ ದರ 1148 ರೂ. ಇದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು, ಹಬ್ಬದ ಸಂದರ್ಭದಲ್ಲಿ ವಿಶೇಷ ಬಸ್ಗಳ ದರವನ್ನು ಹೆಚ್ಚಳ ಮಾಡುತ್ತೇವೆ. ಈ ಹಿಂದೆಯು ಹಬ್ಬದ ವೇಳೆ ದರ ಹೆಚ್ಚಿಸಿದ್ದೆವು. ಸಾಮಾನ್ಯ ಬಸ್ಗಳ ದರ ಎಂದಿನಂತೆಯೇ ಇದೆ ಎಂದು ಹೇಳುತ್ತಾರೆ. ಇದಲ್ಲದೆ, ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 1200 ಬಸ್ಗಳನ್ನು ಕೆಎಸ್ಆರ್ಟಿಸಿ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಓಡಿಸುತ್ತಿದೆ. ಸೆ. 15ರಿಂದ ಸೆ.17ರ ವರೆಗೆ 1200 ಹೆಚ್ಚುವರಿ ಬಸ್ಗಳು ರಾಜ್ಯ ಮತ್ತು ಹೊರರಾಜ್ಯಗಳಿಗೆ ಓಡಾಡಲಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ಸಿಗಲಿದೆ. ಹೋಗಿ ಬರುವ ಪ್ರಯಾಣದ ಟಿಕೆಟ್ ಕಾಯ್ದಿರಿಸಿದರೆ, ಹಿಂದಿರುಗುವ ಪ್ರಯಾಣ ದರದಲ್ಲಿ ಶೇ. 10 ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ, ಸುದ್ದಿಗೋಷ್ಟಿ ನಡೆಸಿದ್ದ ಶಿವಮೊಗ್ಗ ವಿಭಾಗದ ಕೆಎಸ್ಸಾರ್ಟಿಸಿ ಅಧಿಕಾರಿ, ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳ ದರ ಹೆಚ್ಚಿಸಿದರೆ ದೂರು ಕೊಡುವಂತೆ ಹೇಳಿದ್ದರು. ದರ ಹೆಚ್ಚಿಸುವ ಬಸ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಈಗ ಖಾಸಗಿಯ ಜೊತೆಗೆ ಕೆಎಸ್ಸಾರ್ಟಿಸಿಯೂ ದರ ಹೆಚ್ಚಿಸಿದೆ.
Ahead of the Ganesh Chaturthi celebrations on Monday, thousands of people from across Bengaluru are heading to their respective hometowns this weekend. And as it happens every year, private bus services have significantly hiked the ticket fares to make quick gains on the limited time rush. The fares have been hiked despite a warning from the Transport Commissioner that any spike in ticket prices will invite strict action.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm