ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm