ಬ್ರೇಕಿಂಗ್ ನ್ಯೂಸ್
18-09-23 09:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18: ರಾಜ್ಯದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ ತಡೆಯಾಜ್ಞೆ ನೀಡಿದೆ. ಆದರೆ ಪ್ರಜ್ವಲ್ ಅವರು ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಬಹುದಾದರೂ ಸಂಸದರಾಗಿ ಮತ ಚಲಾಯಿಸಲು ಮತ್ತು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಪೀಠ ಹೇಳಿದೆ.
ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಕೆಕೆ ವೇಣುಗೋಪಾಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಚುನಾವಣಾ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಬಾಲಾಜಿ ಶ್ರೀನಿವಾಸನ್ ವಾದ ಮಂಡಿಸಿದರು.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಜ್ವಲ್ ಅವರ ಚುನಾವಣಾ ಅಫಿಡವಿಟ್ನಲ್ಲಿ ಅವರ ಆಸ್ತಿ ಸೇರಿದಂತೆ ಸಂಪೂರ್ಣ ಅಗತ್ಯವಿರುವ ವಿವರಗಳನ್ನು ಬಹಿರಂಗಪಡಿಸದ ಕಾರಣ 2019ರ ಚುನಾವಣೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿತ್ತು. ನ್ಯಾಯಮೂರ್ತಿ ಕೆ ನಟರಾಜನ್ ಅವರು ಅಂದಿನ ಬಿಜೆಪಿ ಅಭ್ಯರ್ಥಿ ಮತ್ತು ಈಗ ಜೆಡಿಎಸ್ ಶಾಸಕ ಎ ಮಂಜು ಮತ್ತು ಇನ್ನೊಬ್ಬರು ಸಲ್ಲಿಸಿದ್ದ ಚುನಾವಣಾ ಅರ್ಜಿಗಳ ಮೇಲೆ ತೀರ್ಪು ನೀಡಿದ್ದರು.
The Supreme Court on Monday stayed the Karnataka High Court's September 1 order declaring the election of lone JD(S) MP Prajwal Revanna from Hassan as null and void. A bench of Chief Justice D Y Chandrachud and Justices J B Pardiwala and Manoj Mishra, however, said Prajwal would not be entitled to cast his vote and receive any allowances as an MP, though he can participate in Parliament's proceedings.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm