ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm