ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.

ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm