ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.

ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:45 am
Mangalore Correspondent
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm