ಬ್ರೇಕಿಂಗ್ ನ್ಯೂಸ್
20-09-23 10:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.20: ಸ್ವಯಂಘೋಷಿತ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಪ್ರಣವಾನಂದ ಸ್ವಾಮೀಜಿಗಳು ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿಗಳೆಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಡಿಗ ಸಮುದಾಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಅವರು ರಾಜಕೀಯ ಮುಖಂಡರಲ್ಲಿ ಬಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಮೂಡಿಸುತ್ತಿರುವುದು ಸರಿಯಲ್ಲ. ನಮ್ಮ ಕೇಂದ್ರ ಸಂಘ ಹಾಗೂ ಜಿಲ್ಲಾ ಸಂಘಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ʼಈಡಿಗ ಸಮುದಾಯ ಸಂಘ ಸ್ಥಾಪನೆಯಾಗಿ 78 ವರ್ಷಗಳು ಕಳೆದಿವೆ. 2008ರಲ್ಲಿ ರೇಣುಕಾನಂದ ಎಂಬವರನ್ನು ಸ್ವಾಮೀಜಿಗಳನ್ನಾಗಿ ನೇಮಕ ಮಾಡಲಾಯಿತು. ಬಳಿಕ ರೇಣುಕಾನಂದರವರು ತಮ್ಮ ಹೆಚ್ಚಿನ ಆಧ್ಯಾತ್ಮಿಕ ಅಧ್ಯಯನಕ್ಕಾಗಿ 2014 ರಲ್ಲಿ ಪೀಠವನ್ನು ತ್ಯಜಿಸಿದರು. ಪ್ರಸ್ತುತ ಬಿ.ಕೆ.ಹರಿಪ್ರಸಾದ್ ಅವರ ಒಪ್ಪಿಗೆ ಮೇರೆಗೆ ವಿಖ್ಯಾತಾನಂದ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ಆದರೆ ಪ್ರಣವಾನಂದ ಅನಧಿಕೃತವಾಗಿ ಈಡಿಗ ಸ್ವಾಮೀಜಿಗಳೆಂದು ಹೇಳಿಕೊಂಡು ಜನಾಂಗವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀಧರ್, ರಾಮನಗರ, ಚಿತ್ರದುರ್ಗ, ಬೆಳಗಾವಿ ಜಿಲ್ಲಾ ಅಧ್ಯಕ್ಷರು, ಬಿಲ್ಲವ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಾಮಧಾರಿ ದೀವರ ಅಧ್ಯಕ್ಷರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
Karnataka Idiga community slams Pranavananda swami says he doesn't belong to Idiga.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm