ಬ್ರೇಕಿಂಗ್ ನ್ಯೂಸ್
21-09-23 08:42 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.21: 2024ರಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗ್ತಾರೆ. ಆನಂತರ ಪಾಕಿಸ್ತಾನದ ಲಾಹೋರಿನಲ್ಲಿ ಗಣಪತಿ ಕೂರಿಸ್ತೀವಿ. ನಮ್ಮ ದೇಶದಲ್ಲಿ ರಾಷ್ಟ್ರಧ್ವಜ ಹಾರಿಸಲು ಈ ಮಕ್ಕಳ ಅನುಮತಿ ಬೇಕಂತೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ವಿವಾದದ ನಡುವೆ ಪೂಜಿಸಲ್ಪಟ್ಟ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಯತ್ನಾಳ್ ಆವೇಶದ ಭಾಷಣ ಮಾಡಿದ್ದಾರೆ. ನಾವು ಚಂದ್ರನ ಮೇಲೆ ರಾಷ್ಟ್ರಧ್ವಜ ಹಾರಿಸಿ ಬಂದೀವಿ. ಇದೇ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡ್ತೀವಿ. ಪಾಕಿಸ್ತಾನದಲ್ಲಿ ತಿನ್ನೋಕೆ ಅನ್ನ ಇಲ್ಲಾ, ಪಾಕಿಸ್ತಾನ್ ಜಿಂದಾಬಾದ್ ಅಂತಾರೆ. ಮೋದಿಯವರು ಇನ್ನೊಮ್ಮೆ ಪ್ರಧಾನಿ ಆಗ್ತಾರೆ, ಪಾಕಿಸ್ತಾನ ದಾಟಿ ಅಪ್ಘಾನಿಸ್ತಾನ್ ಬಾರ್ಡರ್ ವರೆಗೆ ಹೋಗ್ತೀವಿ.


ಹುಬ್ಬಳ್ಳಿಯ ಈ ಮೈದಾನಕ್ಕೆ ಈದ್ಗಾ ಮೈದಾನ ಅಂದ್ರೆ ಸಾಬರಿಗೆ ಹುಟ್ಟಿದಂತೆ. ಈ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನ ಅನ್ಬೇಕು ಎಂದು ಹೇಳಿದ ಯತ್ನಾಳ್, ಡಿಎಂಕೆ ಮುಖಂಡ ಹೇಳ್ತಾನ, ಸನಾತನ ಧರ್ಮಕ್ಕೆ ರೋಗ ಅಂತ. ಸನಾತನ ಧರ್ಮವನ್ನು ವಿರೋಧಿಸುವವರೆಲ್ಲರಿಗೆ ಏಡ್ಸ್ ಬರುತ್ತೆ ಅಂತೀನಿ. ನರೇಂದ್ರ ಮೋದಿಯವರನ್ನು ವಿರೋಧಿಸುವವರೆಲ್ಲಾ ದೇಶದ್ರೋಹಿಗಳು. ಮೋದಿಯವರು ಪ್ರಧಾನಿಯಾಗಿರುವ ಕಾರಣ ದೇಶ ಶಾಂತವಾಗಿದೆ. ವಿಘ್ನಗಳು ನಾಶವಾಗಲಿ ಅಂತಾನೇ ಗಣೇಶ ಹಬ್ಬದ ದಿನ ಹೊಸ ಸಂಸತ್ ಭವನದಲ್ಲಿ ಮೋದಿ ಅಧಿವೇಶನ ಮಾಡ್ತಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಅಂಜುಮನ್ ಆಸ್ತಿನೂ ಅಲ್ಲ, ಪಾಕಿಸ್ತಾನದ ಆಸ್ತಿಯೂ ಅಲ್ಲ. ರಾಜ್ಯದ ವಕ್ಫ್ ಆಸ್ತಿ ಸರ್ಕಾರದ ವಶಕ್ಕೆ ಪಡೆಯಲು ಹೋರಾಡುತ್ತಿದ್ದೇವೆ.
ಶೆಟ್ಟರ್ ಹೆಸರೆತ್ತದೆ ಹಿಂದಿನಿಂದ ಕುತಂತ್ರ ನಡೆಸುತ್ತಿದ್ದಾರೆ ಎಂದು ಪರೋಕ್ಷ ವಾಗ್ದಾಳಿ ನಡೆಸಿದ ಅವರು, ನೀವು ಎಂಪಿ ಎಲೆಕ್ಷನ್ಗೆ ನಿಲ್ಲಿ ನೋಡಿ, ಜನ ಲಗಾ ಹೊಡಿಸ್ತಾರೆ. ಈದ್ಗಾ ಮೈದಾನದಲ್ಲಿ ಶೋಕಾಚರಣೆ ಮಾಡ್ತಾರಂತೆ. ನೀವು ಶೋಕಾಚರಣೆ ಮಾಡಿದ್ರೆ ಇದೇ ಮೈದಾನದಲ್ಲಿ ನಾವು ಹನುಮಾನ್ ಚಾಲಿಸಾ ಪಠಣ ಮಾಡ್ತೀವಿ ಎಂದು ತೆರೆದ ವಾಹನದಲ್ಲೇ ಹನುಮಾನ್ ಚಾಲೀಸಾ ಪಠಣ ಮಾಡಿ ಯತ್ನಾಳ್ ತಿರುಗೇಟು ನೀಡಿದ್ದಾರೆ.
Prime Minister Narendra Modi will once again become the Prime Minister in 21. Then we will make to sit Ganapati in Lahore, Pakistan. Bjp MLA Basanagouda Patil Yatnal said that the permission of these children is required to hoist the national flag in our country.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm