ಬ್ರೇಕಿಂಗ್ ನ್ಯೂಸ್
21-09-23 08:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳಿಂದ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಇತರ ಆಸ್ತಿ ಹಾಗೂ 76 ಲಕ್ಷ ರೂಪಾಯಿ ನಗದು ಮೊತ್ತವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಹಾಲಶ್ರೀ ಮಠದಲ್ಲಿ 56 ಲಕ್ಷ ರೂ. ನಗದು ಪತ್ತೆಯಾಗಿದೆ. ಆನಂತರ, ಸ್ವಾಮೀಜಿಗೆ ಸಂಬಂಧಪಟ್ಟ ವ್ಯಕ್ತಿಯ ಬಳಿಯಲ್ಲಿದ್ದ 20 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಈವರೆಗೆ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದಲ್ಲದೆ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸೇರಿದಂತೆ ನಾಲ್ಕು ಮಂದಿಗೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹಿರೇಹಡಗಲಿ ಮಠದ ಬಳಿಯೇ ಸ್ವಾಮೀಜಿ ಕೃಷಿ ಭೂಮಿ ಖರೀದಿಸಿದ್ದು ಅದಕ್ಕಾಗಿ 20 ಲಕ್ಷ ಅಡ್ವಾನ್ಸ್ ನೀಡಿದ್ದರು. ಆ ಮೊತ್ತವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳೆಲ್ಲ ಇತ್ತೀಚೆಗೆ ಐಷಾರಾಮಿ ಜೀವನ ನಡೆಸುತ್ತಿರುವುದು ಆಪ್ತರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಅವರ ಖಾತೆಗಳನ್ನು ಜಪ್ತಿ ಮಾಡಿದ್ದು ಬೇರೆಯವರ ಹೆಸರಲ್ಲಿ ಬೇನಾಮಿ ಆಸ್ತಿ ಖರೀದಿಸಿದ್ದರೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಇತ್ತೀಚೆಗೆ ಇದೇ ಪ್ರಕರಣದ ಬಗ್ಗೆ ಸುದ್ದಿಗೋಷ್ಟಿ ನಡೆಸಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಒಟ್ಟು 185 ಕೋಟಿ ರೂಪಾಯಿ ಅವ್ಯವಹಾರ ಆಗಿದ್ದು, ಇದರಲ್ಲಿ ಬಿಜೆಪಿಯ ದೊಡ್ಡ ದೊಡ್ಡವರು ಶಾಮೀಲಾಗಿದ್ದಾರೆ. ಚೈತ್ರಾ ಕುಂದಾಪುರ ಮತ್ತು ತಂಡ ವ್ಯವಸ್ಥಿತವಾಗಿ ಹಲವರನ್ನು ಮೋಸಕ್ಕೆ ಬೀಳಿಸಿದೆ. 17 ಮಂದಿ ಮೋಸಕ್ಕೆ ಒಳಗಾಗಿದ್ದರೆ, ಇವರ ತಂಡದಿಂದ ಹಣ ಕೊಟ್ಟಿದ್ದ 23 ಮಂದಿಗೆ ಟಿಕೆಟ್ ಸಿಕ್ಕಿತ್ತು ಎಂದಿದ್ದರು. ಅಲ್ಲದೆ, ಸಿಎಂ ಸಿದ್ದರಾಮಯ್ಯ ಬಳಿಗೆ ನಿಯೋಗ ತೆರಳಿ ಈ ಹಗರಣದ ಬಗ್ಗೆ ಪ್ರತ್ಯೇಕ ತಂಡದಿಂದ ತನಿಖೆ ನಡೆಸುವಂತೆ ಕೋರುತ್ತೇವೆ ಎಂದಿದ್ದರು. ಡೀಲ್ ಪ್ರಕರಣದಲ್ಲಿ ಮಾಹಿತಿ ಇದ್ದರೆ ಹಂಚಿಕೊಳ್ಳುವಂತೆ ಸೂಚಿಸಿ ಸಿಸಿಬಿ ಪೊಲೀಸರು ಈಗ ನೋಟೀಸ್ ಜಾರಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 72 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಕೊನೆಯ ಕ್ಷಣದಲ್ಲಿ ಇವೆಲ್ಲ ಬದಲಾವಣೆ ಆಗಿದ್ದು, ಇದರಿಂದಾಗಿಯೇ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಟಿಕೆಟ್ ಡೀಲ್ ಪ್ರಕರಣ ಹೊರ ಬಿದ್ದಿರುವುದರಿಂದ ಬಿಜೆಪಿ ನಾಯಕರು ತೀವ್ರ ಮುಜುಗರ ಅನುಭವಿಸಿದ್ದಾರೆ.
Chaitra Kundapura fraud case, two crores worth gold seized, Lakshman gets notice by CCB for alleging 185 crore fraud
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm