ಬ್ರೇಕಿಂಗ್ ನ್ಯೂಸ್
23-09-23 04:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಪರ ಸಂಘಟನೆಗಳು ಸೆ.26ರಂದು ಬೆಂಗಳೂರು ಬಂದ್ ನಡೆಸಲು ನಿರ್ಧರಿಸಿವೆ. ಶನಿವಾರ ಫ್ರೀಡಂ ಪಾರ್ಕ್ ನಲ್ಲಿ ಸೇರಿದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಮತ್ತು ರೈತ ಸಂಘಟನೆಗಳ ನಾಯಕರು ಬೆಂಗಳೂರು ಬಂದ್ ಮಾಡಿ ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಣಯಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಧೋರಣೆ ಹಾಗೂ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಇಂದು ಕನ್ನಡ ಪರ ಸಂಘಟನೆಗಳು, ಕಬ್ಬು ಬೆಳೆಗಾರರು, ರೈತರ ಸಂಘಟನೆಗಳು ಸಭೆ ಸೇರಿದ್ದರು. ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಬಿಜೆಪಿ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಅಶ್ವತ್ಥ ನಾರಾಯಣ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಆಗಮಿಸಿ ಧರಣಿಗೆ ಬೆಂಬಲ ಘೋಷಿಸಿದ್ದಾರೆ. ಅಲ್ಲದೆ, ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ನಡೆಯನ್ನು ಟೀಕಿಸಿದ್ದಾರೆ.



ಸಭೆಯ ಬಳಿಕ ರೈತ ಮುಖಂಡ ಕುರಬೂರು ಶಾಂತಕುಮಾರ್ ಸುದ್ದಿಗೋಷ್ಟಿ ಕರೆದು ಸೆ.26ರಂದು ಬಂದ್ ಕರೆ ನೀಡಿದ್ದನ್ನು ತಿಳಿಸಿದ್ದಾರೆ. ಅಂದು ಬೆಳಗ್ಗೆ ಬೆಂಗಳೂರಿನ ಟೌನ್ ಹಾಲ್ ನಲ್ಲಿ ಸೇರಲಿದ್ದು, ಮೈಸೂರು ಬ್ಯಾಂಕ್ ವರೆಗೂ ಮೆರವಣಿಗೆ ನಡೆಸಲಾಗುವುದು. ಬಂದ್, ಪ್ರತಿಭಟನೆಯಲ್ಲಿ ಐಟಿ ಕಂಪನಿಗಳು, ಬೀದಿ ವ್ಯಾಪಾರಿಗಳು ಸೇರಿದಂತೆ ಎಲ್ಲರೂ ಭಾಗಿಯಾಗಬೇಕು. ಸಿನಿಮಾ ರಂಗದವರೂ ಬಂದ್ ಗೆ ಬೆಂಬಲ ಕೊಟ್ಟು ಜೊತೆ ಸೇರಬೇಕು. ಸಿನಿಮಾ ರಂಗದವರನ್ನು ಜನಸಾಮಾನ್ಯರು ಬೆಳೆಸಿದ್ದಾರೆ. ಇಡೀ ಚಿತ್ರೋದ್ಯಮ ಒಂದು ದಿನ ಚಟುವಟಿಕೆ ನಿಲ್ಲಿಸಿ ಕೈಜೋಡಿಸಬೇಕು ಎಂದು ಹೇಳಿದರು.
ಈಗಾಗಲೇ ಮಂಡ್ಯ ಬಂದ್ ಆಗಿದೆ, ಮಂಗಳವಾರ ಒಂದು ದಿನ ಪೂರ್ತಿಯಾಗಿ ಬೆಂಗಳೂರು ಬಂದ್ ಮಾಡುತ್ತೇವೆ. ಕೇಂದ್ರ ಸರಕಾರ ಬೆಂಗಳೂರು ನಗರವನ್ನು ನಿರ್ಲಕ್ಷ್ಯ ಮಾಡಿದ್ದು, ನಮ್ಮ ಬಿಸಿ ಎಲ್ಲರಿಗೂ ತಟ್ಟುವಂತೆ ಮಾಡಬೇಕು ಎಂದು ಕುರಬೂರು ಶಾಂತಕುಮಾರ್ ಹೇಳಿದ್ದಾರೆ.
ಶುಕ್ರವಾರ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಸಭೆ ನಡೆಸಿ, ಸುಪ್ರೀಂ ಕೋರ್ಟ್ ಸೂಚನೆಯಂತೆ ನೀರು ಹರಿಸಲು ಒಪ್ಪಿಗೆ ನೀಡಿದ್ದಾರೆ. ಅದರಂತೆ, ಶನಿವಾರದಿಂದ ದಿನಕ್ಕೆ 5 ಸಾವಿರ ಕ್ಯೂಸೆಕ್ ನಷ್ಟು ನೀರು ತಮಿಳುನಾಡಿಗೆ ಬಿಡಲಾಗುತ್ತಿದೆ.
In the wake of a call by pro-Kannada organisations for a 'bandh' to oppose the release of Cauvery water to Tamil Nadu from dams in Karnataka, most of the shops in the district headquarters town of Mandya, the Cauvery heartland, remained closed on Saturday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm